ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಭಾರೀ ಮಳೆ : ಸಿಡಿಲು ಬಡಿದು ಐವರು ಮೃತ..!

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣ ಅರ್ಭಟ ಜೋರಾಗಿದ್ದು ಇಂದು ಬೆಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಉತ್ತರ ಕರ್ನಾಟಕ ಸೇರಿದಂತೆ ಚಿಕ್ಕಬಳ್ಳಾಪುರ, ಹಾವೇರಿ, ಬಳ್ಳಾರಿ, ವಿಜಯಪುರ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ. ವಿಜಯಪುರ ಮತ್ತು ರಾಯಚೂರಿನಲ್ಲಿ ಒಂಬತ್ತು ಕುರಿ ಮೇಕೆಗಳು ಸಿಡಿಲಿಗೆ ಸಾವನ್ನಪ್ಪಿವೆ.

ಇನ್ನೂ ಬೆಂಗಳೂರಿನಲ್ಲಿ ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ತೆರಳುವ ಮಂದಿಗೆ ಮಳೆ ಭಾರೀ ಹೊಡೆತ ಕೊಟ್ಟಿದೆ. ಜಯನಗರ, ವಿಜಯನಗರ, ಟೌನ್ ಹಾಲ್, ಶಾಂತಿನಗರ, ಮಾರ್ಕೆಟ್, ಯಶವಂತಪುರ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಭಾರೀ ಮಲೇಯಾಗುತ್ತಿದೆ.  ಬೆಳಿಗ್ಗೆಯಿಂದಲೇ ಮಳೆ ಶುರುವಾಗಿದ್ದು ನಗರದಲ್ಲಿ ಜನ ಕೆಲಸಕ್ಕೆ ತೆರಳಲು ವಾಪಸ್ಸು ಹೋಗಲು ಹೈರಾಣಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights