ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ : ನಿರ್ಮಾಪಕ ಸೌಂದರ್ಯ ಜಗದೀಶ್ಗೆ ಸಿಸಿಬಿ ಡ್ರಿಲ್!
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಬಲೆಗೆ ಚಂದನವನದ ಬಹುತೇಕ ಮಂದಿ ಬೀಳುತ್ತಿದ್ದಾರೆ. ಈಗಾಗಲೇ ನಟಿ ಸಂಜನಾ ಹಾಗೂ ರಾಗಿಣಿ ಅವರನ್ನು ಬಂಧಿಸಲಾಗಿದೆ. ಸದ್ಯ ರಾಯಲ್ ಮೀನಾಕ್ಷಿ ಮಾಲ್ ಮಾಲೀಕ ವಿ. ಗಣೇಶ್ ರಾವ್ ಹಾಗೂ ನಿರ್ಮಾಪಕ ಸೌಂದರ್ಯ ಜಗದೀಶ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇಂದು ಸಿಸಿಬಿ ಕಚೇರಿಗೆ ನಿರ್ಮಾಪಕ ಸೌಂದರ್ಯ ಜಗದೀಶ್ ವಿಚಾರಣೆಗೆ ಹಾಜರಾಗುವಂತೆ ತಿಳಿಸಿಲಾಗಿದೆ. ಹೀಗಾಗಿ ಸಿಸಿಬಿ ಮುಂದೆ ಸಂದರ್ಯ ಜಗದೀಶ್ ಹಾಜರಾಗಿದ್ದಾರೆ. ಜಗದೀಶ್ ಅವರು ಸ್ಯಾಂಡಲ್ ವುಡ್ ನಲ್ಲಿ ಅಪ್ಪು-ಪಪ್ಪು, ರಾಮ್ ಲೀಲಾ, ಸ್ನೇಹಿತರು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ಸೌಂದರ್ಯ ಜಗದೀಶ್ ಅವರು ಬಂಧಿತ ಆರೋಪಿಗಳೊಂದಿಗೆ ಸಂಪರ್ಕದಲ್ಲಿದ್ದಾರೆನ್ನಲಾಗುತ್ತಿದೆ. ಅವರನ್ನು ವಿಚಾರಣೆಗೆ ಒಳಪಡಿಸಿ ಅವರಿಂದ ಮಹತ್ವದ ಮಾಹಿತಿಗಳನ್ನು ಪಡೆದು ಸಾಕ್ಷಿಗಳನ್ನಾಗಿ ಪರಿಗಣಿಸುವ ಸಾಧ್ಯತೆಯಿದೆ. ಮೀನಾಕ್ಷಿ ಮಾಲ್ ಹಾಗೂ ಜೆಟ್ ಲಾಗ್ ಪಬ್ ನಲ್ಲಿ ಬಂಧಿತ ನಟಿಯರು ಹಾಜರಾಗಿದ್ರಾ, ಪಾರ್ಟಿಗಳಲ್ಲಿ ಯಾರೆಲ್ಲಾ ಆಗಮಿಸ್ತಾಯಿದ್ರು ಎನ್ನುವ ಪ್ರಶ್ನಗಳನ್ನು ಸಿಸಿಬಿ ಕೇಳುವ ನಿರೀಕ್ಷೆ ಇದೆ.