ಮುನಿರತ್ನ ಪರ ಪ್ರಚಾರಕ್ಕಿಳಿಯಲಿದ್ದಾರೆ ನಟ ದರ್ಶನ್

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಜೆಡಿಎಸ್‌ ಕೊಂಚ ಮೌನವಾದಂತೆ ಕಾಣುತ್ತಿದೆಯಾದರೂ, ಪ್ರಬಲ ಪೈಪೋಟಿಯಂತೂ ಎದುರಾಗಿದೆ. ಬಿಜೆಪಿ ಅಭ್ಯರ್ಥಿಯಾಗಿರುವ ಚಿತ್ರ ನಿರ್ಮಾಪಕ ಮುನಿರತ್ನ ಪರ ಪ್ರಚಾರಕ್ಕೆ ನಟ-ನಟಿಯರು ಪಾಲ್ಗೊಳ್ಳಲಿದ್ದಾರೆ.

ಮುನಿರತ್ನ ಪರವಾಗಿ ನಟ ದರ್ಶನ್ ಗುರುವಾರ ಪ್ರಚಾರ ನಡೆಸಲಿದ್ದಾರೆ. ದರ್ಶನ್ ಸಹ ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದು, ಅವರ ಪ್ರಚಾರದಿಂದ ಮುನಿರತ್ನಗೆ ಮತ್ತಷ್ಟು ಬೆಂಬಲ ವ್ಯಕ್ತವಾಗಲಿದೆ ಎಂದು ಹೇಳಲಾಗಿದೆ.

ಮುನಿರತ್ನ ಮತ್ತು ನಟ ದರ್ಶನ್ ನಡುವಿನ ಸ್ನೇಹ ಸಂಬಂಧವಿದ್ದು, ಕುರುಕ್ಷೇತ್ರ ಸಿನಿಮಾ ಹಿಟ್‌ ಕೊಟ್ಟ ನಂತರ ಅವರ ನಡುವಿನ ಬಾಂದವ್ಯ ಮತ್ತಷ್ಟು ಗಟ್ಟಿಯಾಗಿದೆ.

ಗುರುವಾರ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸುವ ಮೂಲಕ ದರ್ಶನ್ ಮತಯಾಚನೆ ಮಾಡಲಿದ್ದಾರೆ. ದರ್ಶನ್ ಜೊತೆ ಇತರ ಕೆಲವು ನಟ-ನಟಿಯರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ನವೆಂಬರ್ 3ರಂದು ಆರ್. ಆರ್. ನಗರ ಉಪ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಭಾನುವಾರ ಅಂತ್ಯವಾಗಲಿದೆ. ಆದ್ದರಿಂದ, ವಿವಿಧ ರಾಜಕೀಯ ಪಕ್ಷಗಳು ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿವೆ.


ಇದನ್ನೂ ಓದಿ: RRನಗರ ಅಖಾಡ; ಕೈ, ತೆನೆಗಿಂತ ಬಿಜೆಪಿಗಿದೆ ಅದೃಷ್ಟ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights