ಬಿಹಾರ ಚುನಾವಣೆ ನಂತರ ನಿತೀಶ್‌ ಕುಮಾರ್ ಬಿಜೆಪಿ ಸಖ್ಯ ತೊರೆಯಲಿದ್ದಾರೆ: ಚಿರಾಗ್‌ ಪಾಸ್ವಾನ್‌

ಬಿಹಾರದಲ್ಲಿ ಇಂದಿನಿಂದ (ಅಕ್ಟೋಬರ್ 28) ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಈ ಮಧ್ಯೆಯೂ ಚುನಾವಣಾ ಪ್ರಚಾರದಲ್ಲಿ ಬಿಹಾರ ಮುಖ್ಯಮಂತ್ರಿ ವಿರುದ್ಧ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ವಾಗ್ದಾಳಿ ನಡೆಸಿದ್ದು, ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಚುನಾವಣೆಯ ನಂತರ ಬಿಜೆಪಿ ಜೊತೆಗಿನ ಸಖ್ಯವನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಸಿಎಂ ನಿತೀಶ್‌ ಕುಮಾರ್ ಅವರ ಆಡಳಿತದಲ್ಲಿ ಬಿಹಾರ ದುರ್ಬಲವಾಗಿದೆ. ಅವರ ಮಾತುಗಳನ್ನು ಬಿಹಾರವನ್ನು ಮತ್ತಷ್ಟು ದುರ್ಬಲಗೊಳಿಸುತ್ತಿವೆ. ಆದರೆ, ಆರ್‌ಜೆಡಿ  ಮತ್ತು ಮಹಾಘಟಬಂಧನ್‌ ಮತ್ತಷ್ಟು ಗಟ್ಟಿಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ನಿತೀಶ್‌ ಕುಮಾರ್‌ ಪಕ್ಷವೂ ದುರ್ಬಲಗೊಳ್ಳುತ್ತಿದೆ. ಹಾಗಾಗಿ ಅವರು ಅವರು ಬಿಜೆಪಿ ಜೊತೆಗಿನ ಮೈತ್ರಿ ತೊರೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣೆ ಮುಗಿದ ನಂತರ ಆರ್‌ಜೆಡಿ ಜೊತೆಗೆ ಹೋಗುತ್ತಾರೆ ಎಂದಿದ್ದಾರೆ.

ಈ ಹಿಂದೆ ಕೂಡ ನಿತೀಶ್ ಕುಮಾರ್ ಅವರು ಆರ್ ಜೆಡಿ ಸಹಾಯದಿಂದ ಸರ್ಕಾರ ರಚಿಸಿದ್ದರು. ಕಳೆದ 15 ವರ್ಷಗಳಿಂದ ಬಿಹಾರ ಅಭಿವೃದ್ಧಿ ಆಡಳಿತದಲ್ಲಿ ಹಿಂದುಳಿದಿದೆ. ಕೆಟ್ಟ ಸ್ಥಿತಿಯಲ್ಲಿ ಬಿಹಾರ ರಾಜ್ಯವಿದೆ. ಆದರೆ ಇಂದು ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಬಿಹಾರಿಗಳು ಮೊದಲಿಗರಾಗಿ ನಿತೀಶ್ ಕುಮಾರ್ ಮುಕ್ತ ಸರ್ಕಾರವನ್ನು ರಚಿಸಬೇಕು ಎಂದು ಕರೆ ನೀಡಿದರು.

ನಿತೀಶ್ ಕುಮಾರ್ ಅವರ ಪಕ್ಷ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ-ಎಲ್ ಜೆಪಿ ಸರ್ಕಾರ ಈ ಚುನಾವಣೆ ಮುಗಿದ ನಂತರ ಸರ್ಕಾರ ರಚಿಸಲಿವೆ ಎಂದು ಚಿರಾಗ್ ಪಾಸ್ವಾನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಚುನಾವಣಾ ಆಯೋಗ ಮೌನ; ನ್ಯಾಯಸಮ್ಮತ ಮತದಾನ ನಡೆಯುವುದು ಅನುಮಾನ: ದಿನೇಶ್‌ ಗುಂಡೂರಾವ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights