ಬಿಜೆಪಿಗೆ ಮತ ಕೇಳುವ ಭರದಲ್ಲಿ ಕಾಂಗ್ರೆಸ್ಗೆ ಮತಹಾಕಿ ಎಂದ ಜ್ಯೋತಿರಾಧಿತ್ಯಾ ಸಿಂಧಿಯಾ: ಕೈ ಕಾರ್ಯಕರ್ತರಿಂದ ಟ್ರೋಲ್
ಮಧ್ಯಪ್ರದೇಶದಲ್ಲಿ ನವೆಂಬರ್ 3ರಂದು 28 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯ ಕೊನೆಯ ಹಂತದ ಪ್ರಚಾರದ ವೇಳೆ ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ, ಮಾತಿನ ಭರದಲ್ಲಿ ಕಾಂಗ್ರೆಸ್ಗೆ ಓಟು ನೀಡಿ ಎಂದು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರ ಪರ ಗ್ವಾಲಿಯರ್ ನ ದಬ್ರಾ ಪಟ್ಟಣದಲ್ಲಿ ಪ್ರಚಾರ ನಡೆಸುತ್ತಾ ಭಾಷಣದ ಕೊನೆಗೆ ಜನರಲ್ಲಿ ನವೆಂಬರ್ 3ರ ಉಪ ಚುನಾವಣೆ ದಿನ ನಿಮ್ಮ ಮತವನ್ನು ಕೈಗೆ ಒತ್ತಿ ಎಂದು ಕೇಳಿದ ಸಿಂಧಿಯಾ, ತಕ್ಷಣವೇ ತಮ್ಮ ತಪ್ಪನ್ನು ತಿದ್ದಿಕೊಂಡು ನಿಮ್ಮ ಮತವನ್ನು ಕಮಲದ ಗುರುತಿಗೆ ಹಾಕಿ ಎಂದು ಕೇಳಿಕೊಂಡರು.
ಈ ವಿಡಿಯೊವನ್ನು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದು, ಸಿಂಧಿಯಾರವರೇ, ಮಧ್ಯ ಪ್ರದೇಶದ ಜನರು ನವೆಂಬರ್ 3 ರಂದು ಕೈಯ ಗುರುತಿಗೆ ಮತ ಹಾಕುತ್ತಾರೆ ಎಂದು ನಿಮಗೆ ಖಂಡಿತಾ ಭರವಸೆ ಕೊಡುತ್ತಾರೆ ಎಂದರು.
मध्यप्रदेश में कमलनाथ जी की लहर देख अब गद्दार सिंधिया के मुंह पर भी सच्चाई आ गई..! pic.twitter.com/nnhtUlywHF
— MP Youth Congress (@IYCMadhya) October 31, 2020
ಕಳೆದ ಮಾರ್ಚ್ ತಿಂಗಳಲ್ಲಿ ಸಿಂಧಿಯಾ ಮತ್ತು ಅವರ ಬೆಂಬಲಿಗ 28 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಮಲ್ನಾಥ್ ಅವರ ಸರ್ಕಾರವನ್ನು ಉರುಳಿಸಿದ್ದರು. ನಂತರ ಬಿಜೆಪಿ ಸೇರಿದ ಸಿಂಧಿಯಾ ಪರಿವಾರ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು.
ಇದನ್ನೂ ಓದಿ: ಉತ್ತಮ ಆಡಳಿತದಲ್ಲಿ ನಂ.1 ರಾಜ್ಯ ಕೇರಳ: ಕೊನೆಯ ಸ್ಥಾನದಲ್ಲಿ ಉತ್ತರ ಪ್ರದೇಶ!