ನಾಳೆ ಆರ್ ಆರ್ ನಗರ-ಶಿರಾ ಉಪಚುನಾವಣೆ : ಅಭ್ಯರ್ಥಿಗಳಿಂದ ಇಂದು ಮನೆ ಮನೆಗೆ ತೆರಳಿ ಮತಯಾಚನೆ..
ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆ ಕಾವು ರಂಗೇರಿದೆ. ಎರಡು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಇಂದುಆರ್ ಮನೆ ಮನೆಗೆ ತೆರಳೆ ಮತಯಾಚನೆ ಮಾಡಲಿದ್ದಾರೆ. ಮತಯಾಚನೆಗೆ ಕೊನೆ ದಿನವಾದ ಇಂದು ಪಕ್ಷಗಳು ಮತಭೇಟೆ ನಡೆಸಲಿದ್ದಾರೆ. ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ನಡೆಯಲಿದೆ.
ಇನ್ನೂ ಶಿರಾ ಕ್ಷೇತ್ರದಲ್ಲಿ ಮಾಜಿ ಸಚಿವ ಟಿ ಬಿ ಜಯಚಂದ್ರ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ಚುನಾವಣೆ ಕಾಳಗ ನಡೆಯಲಿದೆ.
ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಬೇರೆ ಕಡೆಯಿಂದ ಬಂದ ನಾಯಕರು ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತಲೇ ಕ್ಷೇತ್ರ ಬಿಟ್ಟು ಹೋಗಬೇಕಾದ ನಿಮಯವಿದೆ. ಹೀಗಾಗಿ ಇಲ್ಲಿನ ಲೋಕಲ್ ನಾಯಕರು ಇಂದು ಅಂತಿಮ ಮನೆ ಮನೆ ಪ್ರಚಾರದಲ್ಲಿ ಬ್ಯುಸಿಯಾಗಲಿದ್ದಾರೆ.
ಸದ್ಯ ಆರ್ಆರ್ ನಗರ ಹಾಗೂ ಶಿರಾ ಚುನಾವಣೆ ನೂತನವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರಿಗೆ ಅತ್ಯಂತ ಪ್ರತಿಷ್ಠೆಯ ಪ್ರಶ್ನೆಯಾದರೆ, ಕಾಂಗ್ರೆಸ್ನಿಂದ ಬಿಜೆಪಿಗೆ ಬಂದಿರುವ ಮುನಿರತ್ನ ಅವರನ್ನು ಗೆಲ್ಲಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮುಖ್ಯವಾಗಿದೆ. ಒಟ್ಟಾರೆಯಾಗಿ ಜಿದ್ದಾಜಿದ್ದಿನ ಫೈಟ್ನಲ್ಲಿ ಮತದಾರ ಯಾರಿಗೆ ಮಣೆ ಹಾಕಲಿದ್ದಾನೆ ಎನ್ನುವ ಕುತೂಹಲ ಮೂಡಲಾರಂಭಿಸಿದೆ.