ಬೆಂಗಳೂರಿನ ಬಾಪುಜಿ ನಗರದ ಕೆಮಿಕಲ್ ಫ್ಯಾಕ್ಟರಿ ಬೆಂಕಿ ಅವಘಡ : ಮಾಲೀಕ ಸಜ್ಜನ್ ಅರೆಸ್ಟ್!

ಮಂಗಳವಾರ ಬೆಂಗಳೂರಿನ ಬಾಪುಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿರುವ ರೇಖಾ ಕೆಮಿಕಲ್ ಫ್ಯಾಕ್ಟರಿಯ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಪ್ರಕರಣದ ಆರೋಪಿ ಮಾಲೀಕ ಸಜ್ಜನ್ ರಾಜ್ ಮೇಲೆ 2 ಪ್ರಕರಣ ದಾಖಲಾಗಿದೆ. ಹೀಗಾಗಿ ನಿನ್ನೆ ಪೊಲೀಸರು ಮಾಲೀಕ ಸಜ್ಜನ್ ರಾಜ್ ಅವರನ್ನು ಬಂಧಿಸಿದ್ದಾರೆ.

ನಗರದ ಹೊಸ ಗುಡ್ಡದಹಳ್ಳಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿ ಅಕ್ಕ ಪಕ್ಕದ ಮನೆಗಳಿಗೂ ಹೊತ್ತಿಕೊಂಡಿತು. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತಿ ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುವಂತಾಯಿತು. ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.

ಈ  ಬೆಂಕಿ ಅವಘಡಕ್ಕೆ ಮಾಲೀಕ ಮಾಲೀಕ ಸಜ್ಜನ್ ರಾಜ್ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.  ಯಾವುದೇ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದ ಕಾರಣದಿಂದ ಬೆಂಕಿ ದುರಂತ ಸಂಭವಿಸಿದೆ ಎನ್ನಲಾಗಿದೆ.ಹೀಗಾಗಿ ಮಾಲೀಕ ಸಜ್ಜನ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಘಟನೆಯಂದು ನಾಪತ್ತೆಯಾಗಿದ್ದರು.

ಕೆಮಿಕಲ್ ಸಂಗ್ರಹ ಮಾಡಲು ಅನುಮತಿ ಪಡೆಯದೇ ಸಜ್ಜನ್ ರಾಜ್ ಅಕ್ರಮವಾಗಿ ಸಂಗ್ರಹ ಮಾಡಿದ್ದ ಎನ್ನಲಾಗಿದೆ. ನಿನ್ನೆ ಲಾರಿಯಲ್ಲಿ ಬೆಳಗ್ಗೆ ಲಾರಿಯಲ್ಲಿ ಬ್ಯಾರಲ್ ನಿಂದ ಕೆಮಿಕಲಗಸಗ ಅನ್ನುಪೈಪ್ ಮೂಲಕ ನಾಲ್ವರು ಕಾರ್ಮಿಕರು ಅನ್ ಲೋಡ್ ಮಾಡುತ್ತಿದ್ದಾಗ ಕಿಡಿ ಹೊತ್ತಿಕೊಂಡು ಬೆಂಕಿ ಆವರಿಸಿತ್ತು. ಸಿಗರೇಟ್ ಅಥವಾ ಬೀಡಿ ಯಿಂದ ಬೆಂಕಿ ತಾಗಿದ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಡೆಯುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಮಾಲೀಕರು ಎಸ್ಕೇಪ್ ಆಗಿದ್ದರು.

ಅಕ್ಕ ಪಕ್ಕದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಬೃಹತ್ ಪ್ರಮಾಣದಲ್ಲಿ ಹರಡಿದ ಬೆಂಕಿಯನ್ನು ನಂದಿಸುವ ಕಾರ್ಯಕ್ಕೆ ಪೊಲೀಸರು ಹರಸಾಹಸ ಪಡುವಂತಾಯಿತು. ದುರಾದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಸದ್ಯ ಸಜ್ಜನ್ ನನ್ನು ವಶಪಡಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights