ಹಳ್ಳಿಹಕ್ಕಿ‌, ಎಂಟಿಬಿ, ಶಂಕರ್‌ಗೆ ಸಚಿವ ಸ್ಥಾನ; ಆಯ್ಕೆ ಕಡತಗಳನ್ನು ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

ವಿಧಾನಸಭೆಯಲ್ಲಿ ಅನರ್ಹಗೊಂಡು, ಉಪಚುನಾವಣೆಯಲ್ಲಿ ಸೋಲನುಭವಿಸಿ, ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಹೆಚ್‌.ವಿಶ್ವನಾಥ್‌, ಆರ್‌.ಶಂಕರ್ ಮತ್ತು ಎಂಟಿಬಿ ನಾಗರಾಜು ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಆಯ್ಕೆ ಸಂಬಂಧಿತ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಮೂವರಿಗೂ ಎಂಎಲ್‌ಸಿ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಕೀಲ ಎ ಹರೀಶ್‌ ಮತ್ತು ಹಲವರು ಪಿಐಎಲ್‌ ಸಲ್ಲಿಸಿದ್ದು, ಈ ಮೂವರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಅನರ್ಹರಾದವರು ಚುನಾವಣೆಯ ಮೂಲಕ ಮರು ಆಯ್ಕೆಯಾಗಲು ಮಾತ್ರ ಅವಕಾಶವಿದೆ. ಆದರೆ ಎಚ್‌ ವಿಶ್ವನಾಥ್‌ ನಾಮನಿರ್ದೇಶಿತ ಶಾಸಕರಾಗಿದ್ದು ಆಯ್ಕೆಯೇ ಸಂವಿಧಾನ ಬಾಹಿರವಾಗಿದೆ. ಎಂಟಿಬಿ ನಾಗರಾಜ್‌, ಆರ್‌ ಶಂಕರ್‌ ಚುನಾವಣೆಯಲ್ಲಿ ಸ್ಪರ್ಧಿಸದೆ ಹಿಂಬಾಗಿಲಿನಿಂದ ಆಯ್ಕೆಯಾಗಿದ್ದಾರೆ. ಇದೀಗ ಸಚಿವ ಸ್ಥಾನ ನೀಡಲಾಗುತ್ತಿದೆ. ಇದು ಸಂವಿಧಾನ ಬಾಹಿರ ಎಂದು ಆರೋಪಿಸಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಈ ವಿಚಾರದಲ್ಲಿ ಸರ್ಕಾರ ವಿಳಂಬ ಮಾಡದೆ ಆಕ್ಷೇಪಣೆ ಸಲ್ಲಿಸಬೇಕು. ಸಚಿವ ಸ್ಥಾನಕ್ಕೆ ಆಯ್ಕೆ ಸಂಬಂಧಿತ ಕಡತಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಮಧ್ಯಂತರ ಆದೇಶ ನೀಡಿದೆ.


ಇದನ್ನೂ ಓದಿ: ಉಪಚುನಾವಣೆ ಗೆದ್ದರೂ ಮುಗಿಯದ ಸಿಎಂ ಗೋಳು: ಬಿಎಸ್‌ವೈ ಮುಂದೆ ಸಂಪುಟದ ಕಗ್ಗಂಟು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights