ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ಸತೀಶ್ ದುಪೇಲಿಯಾ ನಿಧನ!

ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ಸತೀಶ್ ದುಪೇಲಿಯಾ ಅವರು ದಕ್ಷಿಣ ಆಫ್ರಿಕಾದ ಜೊಹಾನ್ಸ್​ಬರ್ಗ್​​ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ನ್ಯೂಮೋನಿಯಾ ರೋಗದಿಂದ ಬಳಲುತ್ತಿದ್ದ ಸತೀಶ್ ಅವರು ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರಿಗೆ ಸೋಂಕು ಕೂಡ ತಗುಲಿದ್ದು, ಸಾವನ್ನಪ್ಪಿದ್ದಾರೆ ಎಂದು ಅವರ ಸಹೋದರಿ  ಉಮಾ ದುಪೇಲಿಯಾ ಹೇಳಿದ್ದಾರೆ.

ನ್ಯೂಮೋನಿಯಾದಿಂದ ಬಳಲುತಿದ್ದು ಸತೀಶ್‌ ದುಪೇಲಿಯಾ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ಕೂಡ ತಗುಲಿತ್ತು. ಅಲ್ಲದೆ, ನಿನ್ನೆ ಸಂಜೆ ಅವರಿಗೆ ಹೃದಯಾಘಾತವೂ ಸಂಭವಿಸಿತ್ತು. ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಉಮಾ ದುಪೇಲಿಯಾ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ತಮ್ಮ 66ನೇ ಹುಟ್ಟುಹಬ್ಬವನ್ನು ಸತೀಶ್‌ ದುಪೇಲಿಯಾ ಆಚರಿಸಿಕೊಂಡಿದ್ದರು. ಅವರು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಡಿಯೋಗ್ರಾಫರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಗಾಂಧಿ ಅಭಿವೃದ್ಧಿ ಟ್ರಸ್ಟ್​​ನಲ್ಲೂ ಸಕ್ರಿಯರಾಗಿ ಕೆಲಸ ಮಾಡಿದ್ದರು.


ಇದನ್ನೂ ಓದಿ: ಹೆರಿಗೆಗೂ ಲಂಚ ಕೇಳುತ್ತಿರುವ ವೈದ್ಯರು; ಹುಟ್ಟುವ ಮುನ್ನವೇ ಮಗು ಸಾವು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights