ಆಂಧ್ರ ಜನರಿಂದ ಬಿಜೆಪಿ ಸಂಸದ ತೇಜಸ್ವಿಸೂರ್ಯ ಟ್ರೋಲ್‌!

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ ಮೂರು ಕ್ಷೇತ್ರಗಳ ಜವಾಬ್ದಾರಿ ಹೊತ್ತು ಬಿಜೆಪಿ ಪರ ಪ್ರಚಾರದಲ್ಲಿರುವ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಹೈದರಾಬಾದಿಗರು ತೀವ್ರವಾಗಿ ಟ್ರೋಲ್ ಮಾಡುತ್ತಿದ್ದಾರೆ.

#DengeyTejasviSurya ಎಂಬ ಹ್ಯಾಶ್ ಟ್ಯಾಗ್ ಭಾರತದಲ್ಲೇ ಟಾಪ್ ಟ್ರೆಂಡಿಂಗ್‌ನಲ್ಲಿದ್ದು, ಇದರ ವಿರುದ್ದ ಸ್ವಾಗತಂ ತೇಜಸ್ವಿ ಸೂರ್ಯ ಎಂಬ ಪದ ಕೂಡಾ ಟ್ರೆಂಡಿಂಗ್‌ನಲ್ಲಿದೆ.

ಇದನ್ನೂ ಓದಿ: BJP ಆಡಳಿತ ನಡೆಸಲು ವಿಫಲವಾದರೂ ಚುನಾವಣೆಗಳನ್ನು ಗೆಲ್ಲುತ್ತದೆ! ಹೇಗೆ ಹೊತ್ತೇ?

ಹೈದರಾಬಾದ್​ನ ಪಾಲಿಕೆ ಚುನಾವಣೆಯ ಪ್ರಚಾರದಲ್ಲಿ ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವ ತೇಜಸ್ವಿ ಸೂರ್ಯ, ಹೈದರಾಬಾದನ್ನು ಭಾಗ್ಯನಗರ ಎಂದು ಹೆಸರು ಬದಲಾವಣೆ ಮಾಡಬೇಕು ಎಂದು ಹೇಳಿದ್ದರು. ಇದರ ವಿರುದ್ದವಾಗಿ ಅಲ್ಲಿನ ಬಿಜೆಪಿಯೇತರ ಪಕ್ಷಗಳ ಬೆಂಬಲಿಗರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಟ್ರೋಲ್ ಮಾಡುತ್ತಿರುವ ಪದ ಕೆಟ್ಟದಾಗಿರುವುದರಿಂದ ಕೆಲವರು ಇದಕ್ಕೆ ಆಕ್ಷೇಪ ಎತ್ತಿದ್ದಾರೆ.

https://twitter.com/pseudoEnglneer/status/1330790205046091777?s=20

https://twitter.com/Faizal_Peraje/status/1330789159582138368?s=20


ಇದನ್ನೂ ಓದಿ: ಕೈಗಾರಿಕೆಗಳಿಗೆ ಭೂಮಿ ಕೊಡಲ್ಲ; ಭೂಸ್ವಾಧೀನದ ವಿರುದ್ಧ ರೈತರ ಆಕ್ರೋಶ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights