ಚನ್ನಪಟ್ಟಣಕ್ಕೆ ನಾನೇ ಸಚಿವ; ನಾನೇ ಸರ್ಕಾರ: ಹೆಚ್ಡಿ ಕುಮಾರಸ್ವಾಮಿ
ಬಿಜೆಪಿ ಸರ್ಕಾರ ರಾಮನಗರ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ, ಯಾರನ್ನಾದರೂ ಮಾಡಲಿ. ಆದರೆ, ಚನ್ನಪಟ್ಟಣಕ್ಕೆ ನಾನೇ ಸಚಿವ, ನಾನೇ ಸರ್ಕಾರ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಯಡಿಯೂರಪ್ಪರಿಗೆ ಹೇಳಿಲ್ಲ. ನಾನು ಅವರನ್ನು ಭೇಟಿ ಮಾಡಿದ್ದು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚಿಸುವುದಕ್ಕಾಗಿ. ಬಡವರ ಭೂಮಿ ಕಬಳಿಸಲು ಹೊರಟವರು ಮಂತ್ರಿಯಾಗಲು ಹೊರಟಿದ್ದಾರೆ. ಇಲ್ಲಿ ಯಾರೋ ಮಂತ್ರಿಯಾದರೆ ಹೆದರಿಕೊಂಡು ಹೋಗುವ ಜಾಯಮಾನ ನನ್ನದಲ್ಲ’ ಎಂದು ಅವರು ಹೇಳಿದ್ದಾರೆ.
ರಾಜಕೀಯದಲ್ಲಿ ಎಂಥೆಂತವರನ್ನೆಲ್ಲಾ ನಾವು ನೋಡಿಲ್ಲ. ಅಂತದ್ದರಲ್ಲಿ ಇಲ್ಯಾರೋ ಮಂತ್ರಿಯಾದ್ರೆ ಹೆದರಿಕೊಂಡು ಓಡಿ ಹೋಗ್ತಿವಾ. 10 ಕೆರೆ ತುಂಬಿಸಿ ಭಗೀರಥ ಆಗಿಬಿಟ್ಟಿದ್ದಾರೆ. ನಾನು 128 ಕರೆ ತುಂಬಿಸಿದ್ದೇನೆ. ನನ್ನದು ಪ್ರಾಮಾಣಿಕ ಕೆಲಸ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಾಟರ್ ಜೆಟ್ ನಿಲ್ಲಿಸಿದ ರೈತ ಪ್ರತಿಭಟನೆಯ ‘ಹೀರೋ’; ಯುವ ರೈತನ ಮೇಲೆ ಕೊಲೆಯತ್ನ ಕೇಸ್ ದಾಖಲು!