ವಲಸೆ ಬಿಜೆಪಿಗನಿಗೆ ಚಾಮುಂಡೇಶ್ವರಿ ಶಾಪ, ಮೂಲ ಕಾಂಗ್ರೆಸ್ಸಿಗನಿಗೆ ಗೋವುಗಳ ಶಾಪ!
ಕಾಂಗ್ರೆಸ್ ಅಲ್ಲಲ್ಲಿ ಸ್ಥಾನ ಉಳಿಸಿಕೊಂಡಿದೆ. ಸದ್ಯದಲ್ಲೇ ಕಾಂಗ್ರೆಸ್ ಅದನ್ನೂ ಕಳೆದುಕೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಪಟೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಗೋವುಗಳ ಶಾಪ ತಟ್ಟಿದೆ. ಹೀಗಾಗಿ ಅಧಿಕಾರ ಕಳೆದುಕೊಂಡಿದೆ ಎಂದಿದ್ದಾರೆ. ಗೋ ಹತ್ಯೆ ನಿಷೇಧ ಬಗ್ಗೆ ಚರ್ಚಿಸಿ ಆದಷ್ಟು ಬೇಗ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ತೊರೆದ ಎಚ್.ವಿಶ್ವನಾಥ್ಗೆ ಚಾಮುಂಡೇಶ್ವರಿ ತಾಯಿಯ ಶಾಪ ತಟ್ಟಿದೆ ಎಂದ ಸಾ.ರಾ.ಮಹೇಶ್ ಹೇಳಿದ್ರು.
ಸಿದ್ದರಾಮಯ್ಯನವರು ಯಾವ ಯಾವ ಸಂದರ್ಭದಲ್ಲಿ ಏನೇನು ಹೇಳಿಕೆ ಕೊಡುತ್ತಾರೆಂದು ಅವರಿಗೇ ಗೊತ್ತಿರುವುದಿಲ್ಲ. ನಾವು ಗೋವನ್ನು ತಾಯಿಯೆಂದು ಕರೆಯುತ್ತೇವೆ. ಸಿದ್ದರಾಮಯ್ಯ ಅವರ ತಾಯಿಯನ್ನು ಕೂಡ ನಾವು ತಾಯಿ ಎಂದು ಕರೆಯುತ್ತೇವೆ. ಸಿದ್ದರಾಮಯ್ಯನವರ ತಾಯಿಗೆ ವಯಸ್ಸಾಗಿದೆ ಅಂತ ಬಿಜೆಪಿ ಹಾಗೂ ಆರ್ಎಸ್ಎಸ್ ನವರ ಮನೆ ಮುಂದೆ ಬಿಡಲಾಗುತ್ತದೆಯೇ? ಈ ರೀತಿ ಹೇಳಿಕೆ ನೀಡಿ ಸಿದ್ದರಾಮಯ್ಯ ನವರು ಮುಸಲ್ಮಾನರನ್ನು ಸಂತೃಪ್ತಿ ಪಡಿಸುತ್ತಿದ್ದಾರೆ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದರು.