ಸಿಎಂ ತವರು ಜಿಲ್ಲೆ ಶಿವಮೊಗ್ಗದ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!
ಅನಾರೋಗ್ಯಕ್ಕೆ ಒಳಗಾಗಿದ್ದ ತಾಯಿಯ ಜೊತೆಗೆ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಸಿಎಂ ತವರು ಜಿಲ್ಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಅಗಿ ಕೆಲಸ ಮಡುತ್ತಿದ್ದ ಮನೋಜ್ ಎಂಬಾತ, ಬಾಲಕಿಗೆ ಊಟ ಕೊಡಿಸುವುದಾಗಿ ಕಾರಿದೊಯ್ದು, ತನ್ನ ಮೂವರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾರೆ.
ಘಟನೆ ಬಳಿಕ ಆಸ್ಪತ್ರೆಗೆ ಬಂದ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಆರೋಪಿಗಳಾದ ಪ್ರಜ್ವಲ್, ವಿನಯ್ ಮತ್ತು ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಸ್ತೆಗಳಿಲ್ಲ, ಕುಡಿಯಲು ಶುದ್ಧ ನೀರಿಲ್ಲ; ಗ್ರಾಮ ಪಂ. ಚುನಾವಣೆ ಬಹಿಷ್ಕಾರಕ್ಕೆ ಹಳ್ಳಿಗರ ನಿರ್ಧಾರ!