ರಾಜ್ಯದಲ್ಲಿ ಲವ್ ಜಿಹಾದ್ – ಗೋ ಹತ್ಯೆ ನಿಷೇಧ ಕಾನೂನು ಜಾರಿ ಶತಸಿದ್ಧ: ಅಶ್ವತ ನಾರಾಯಣ

ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಗೋಹತ್ಯೆ ವಿರುದ್ಧ ಕಾನೂನುಗಳನ್ನು ಜಾರಿಗೆ ತರುವುದು ನಿಶ್ಚಿತ. ಈ ಬಗ್ಗೆ ಸರ್ಕಾರದ ನಿಲುವು ಅಚಲವಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

ಲವ್ ಜಿಹಾದ್ ಹಾಗೂ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡುವುದು ನಮ್ಮ ಸರ್ಕಾರದ ಆದ್ಯತೆ. ಈ ಬಗ್ಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿಯೂ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಈ ಎರಡೂ ಸಾಮಾಜಿಕ ಪಿಡುಗುಗಳನ್ನು ಇನ್ನಿಲ್ಲವಾಗಿಸುವುದು ನಮ್ಮ ಕರ್ತವ್ಯ. ಅದರಂತೆ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಮುಂದಡಿ ಇಡಲಿದೆ. ಲವ್ ಜಿಹಾದ್ ಹಾಗೂ ಗೋ ಹತ್ಯೆ ವಿರುದ್ಧ ಕಾನೂನು ಜಾರಿಗೆ ಆಗ್ರಹಿಸಿ ಠರಾವು ಕೂಡ ಪಾಸ್ ಮಾಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಉತ್ತರಪ್ರದೇಶ ಸರ್ಕಾರದಂತೆ ಕರ್ನಾಟಕದಲ್ಲೂ ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಜಾರಿಗೆ ತರುವುದು ಶತಸಿದ್ಧ ಎಂದಿದ್ದಾರೆ.


ಇದನ್ನೂ ಓದಿ: ತೆರದಾಳ ಪುರಸಭೆ ಮಹಿಳಾ ಸದಸ್ಯೆ ಮೇಲೆ ಬಿಜೆಪಿ ಶಾಸಕ ಹಲ್ಲೆ; ಸಿಎಂ ಮೌನವೇಕೆ ಎಂದು ಡಿಕೆಶಿ ಆಕ್ರೋಶ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights