ಕೃಷಿ ಕಾಯ್ದೆ ರದ್ದಾಗದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಸ್: ಬಾಕ್ಸರ್ ವಿಜೇಂದರ್ ಸಿಂಗ್
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸದಿದ್ದರೆ ಖೇಲ್ ರತ್ನ ಪ್ರಶಸ್ತಿ ವಾಪಸ್ ನೀಡುವುದಾಗಿ ಬಾಕ್ಸರ್ ಕ್ರಿಡಾ ಪಟು ವಿಜೇಂದರ್ ಸಿಂಗ್ ಹೇಳಿದ್ದಾರೆ.
ದೆಹಲಲಿ ಗಡಿಯಲ್ಲಿ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರಿಗೆ ವಿಜೇಂದರ್ ಸಿಂಗ್ ಬೆಂಬಲ ನೀಡಿದ್ದಾರೆ. ರೈತ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಂಗ್, ನಮ್ಮ ದೊಡ್ಡಣ್ಣ ಪಂಜಾಬ್ ಇಲ್ಲಿರುವುದರಿಂದ ಇಲ್ಲಿಗೆ ಬಂದಿದ್ದೇನೆ. ಸರ್ಕಾರವು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ, ರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಖೇಲ್ ರತ್ನವನ್ನು ವಾಪಸ್ ನೀಡುತ್ತೇವೆ ಎಂದು ಹೇಳಿದ್ದಾರೆ.
ಕೃಷಿ ಕಾನೂನುಗಳ ಜಾರಿಗೆ ಬರುವ ಮುಂಚಿನಿಂದಲೂ ರೈತರ ಐಕ್ಯತೆ ಯಾವಾಗಲೂ ಇರುವುದಾಗಿ ಅವರು ಹೇಳಿದ್ದಾರೆ.
ಈ ನಡುವೆ ಮಾಜಿ ರಾಷ್ಟ್ರೀಯ ಬಾಕ್ಸಿಂಗ್ ತರಬೇತುದಾರ ಗುರ್ಬಾಕ್ಷ್ ಸಿಂಗ್ ಸಂಧು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ದ್ರೋಣಚಾರ್ಯ ಪ್ರಶಸ್ತಿಯನ್ನು ಹಿಂತಿರುಗಿಸಲು ನಿರ್ಧರಿಸಿದ್ದಾರೆ.
ರೈತರ ಹೋರಾಟಕ್ಕೆ ವಿದ್ಯಾರ್ಥಿಗಳು, ವೈದ್ಯರು, ವಕೀಲರು, ಸರಕು ಸಾಗಣಿಕೆದಾರರು, ಕ್ರೀಡಾ ಪಟುಗಳು, ಬಾಲಿವುಡ್ ಹಾಗೂ ಪಂಜಾಬಿ ಚಿತ್ರೋದ್ಯಮ ಮತ್ತು ಹಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ.
Read Also: ರೈತರು ಮತ್ತು ‘ಗೋದಿ ಮೀಡಿಯಾ’: ನ್ಯೂಸ್ ಚಾನೆಲ್ಗಳ ಧೋರಣೆಗಳೇನು ಓದಿ!