ಭಾರತ್ ಬಂದ್: ರೈತರ ಪ್ರತಿಭಟನೆಗೆ ನಟ ಶಿವರಾಜ್ ಕುಮಾರ್ ಬೆಂಬಲ!

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 13 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇಂದು ಭಾರತ್‌ ಬಂದ್‌ ಪ್ರತಿಭಟನೆ ನಡೆಸಲಾಗುತ್ತಿದ್ದು, ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗದ ಸ್ಟಾರ್‌ ನಟ ಡಾ.ಶಿವರಾಜ್‌ ಕುಮಾರ್ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ.. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ.. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ತಿಳಿಸಿದ್ದಾರೆ.

ಚಿತ್ರನಟ ಚೇತನ್ ನಂತರ ರೈತರ ಪರವಾಗಿ ದನಿಯೆತ್ತಿದ ಎರಡನೇ ನಟ ಶಿವರಾಜ್‌ ಕುಮಾರ್ ಆಗಿದ್ದಾರೆ. ಬಾಲಿವುಡ್‌ನಲ್ಲಿ ದಿಲ್ಜಿತ್ ದೋಸಂಜ್, ಸ್ವರ ಭಾಸ್ಕರ್, ರೀಚಾ ಚಡ್ಡಾ, ತಾಪ್ಸಿ ಪನ್ನು ಸೇರಿ, ಪ್ರಿಯಾಂಕಾ ಚೋಪ್ರಾ ಸೇರಿದಂತೆ ಬಹುತೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್‌: ರೈತರಿಗೆ‌ ನಟಿ ಪ್ರಿಯಾಂಕ ಚೋಪ್ರಾ ಮತ್ತು ಸೋನಮ್‌ ಕಪೂರ್‌ ಸಾಥ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights