ಭಾರತ್ ಬಂದ್ಗೆ ಸೈನಿಕ ಬೆಂಬಲ; ಹುಬ್ಬಳ್ಳಿಯಲ್ಲಿ ಸೈನಿಕನನ್ನು ಬಂಧಿಸಿದ ಪೊಲೀಸರು!
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ಕರೆಕೊಟ್ಟಿರುವ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸೈನಿಕರೊಬ್ಬರನ್ನು ಹುಬ್ಬಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸೇನಾ ಪಡೆಯಲ್ಲಿ ಅಸ್ಸಾಂ ಸಿಗ್ನಲ್ ರೆಜಿಮೆಂಟ್ ನಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿರುವ ಕುಂದಗೋಳ ತಾಲೂಕಿನ ಬರದ್ವಾಡ್ ಗ್ರಾಮದ ಸೈನಿಕ ರಮೇಶ್ ಮಾಡಳ್ಳಿ ಅವರು ರಜೆಯ ಮೇಲೆ ಊರಿಗೆ ಬಂದಿದ್ದರು. ರೈತರು ಕರೆಕೊಟ್ಟಿದ್ದ ಭಾರತ್ ಬಂದ್ಗೆ ಬಂಬಲಿ ಸೂಚಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಬಳಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ರೈತನ ಮಗ. ಹೀಗಾಗಿ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದೇನೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನುಗಳು ರೈತರಿಗೆ ಮಾರಕವಾಗಿವೆ. ಅವುಗಳನ್ನು ಸರ್ಕಾರ ಹಿಂಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.
https://twitter.com/Arunkumar_TNIE/status/1336197317402058753?s=20
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅವರ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಭಾರತ್ ಬಂದ್: ರೈತರ ಪ್ರತಿಭಟನೆಗೆ ನಟ ಶಿವರಾಜ್ ಕುಮಾರ್ ಬೆಂಬಲ!