ಕೃಷಿ ಕಾನೂನು: ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ರೈತರು!
ರೈತ ವಿರೋಧಿ ಕಾನೂನುಗಳು ಎಂದು ಹೇಳಲಾಗಿರುವ ಕೃಷಿ ಕಾನೂನುಗಳ ಕುರಿತು ಸರ್ಕಾರ ಕಳಿಸಿದ್ದ ಲಿಖಿತ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕರಿಸಿದ್ದಾರೆ.
ನಾವು ಸರ್ಕಾರದ ಪ್ರಸ್ತಾಪಗಳನ್ನು ತಿರಸ್ಕರಿಸುತ್ತೇವೆ. ಡಿಸೆಂಬರ್ 12ರವೆರೆಗೆ ಜೈಪುರ-ದೆಹಲಿ ಹೆದ್ದಾರಿ ಬಂದ್ ಮಾಡುತ್ತೇವೆ. ಡಿಸೆಂಬರ್ 14 ರಂದು ರಾಜ್ಯಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳಿಗೆ ಘೋರಾವ್ ಹಾಕುತ್ತೇವೆ ಎಂದು ರೈತ ಮುಖಂಡರ ಶಿವ ಕುಮಾರ್ ಕಕ್ಕಾ ಹೇಳಿದ್ದಾರೆ.
ಕೇಂದ್ರ ಸರ್ಕಾರ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ದೆಹಲಿಯ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವುದಾಗಿ ರೈತರು ಹೇಳಿದ್ದಾರೆ.
ಏತನ್ಮಧ್ಯೆ, ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ, ಶರದ್ ಪವಾರ್ ಸೇರಿದಂತೆ ಐದು ವಿರೋಧ ಪಕ್ಷದ ನಾಯಕರು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದಾರೆ.
ಸರ್ಕಾರದ ಪ್ರಸ್ತಾವನೆಯಲ್ಲಿ ಹೊಸದೇನೂ ಇಲ್ಲ. “ನಾವು ಮೂರು ಕೃಷಿ-ಮಾರ್ಕೆಟಿಂಗ್ ಕಾನೂನುಗಳ ವಿರುದ್ಧ ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಎಂದು ರೈತ ಮುಖಂಡ ಪ್ರಹಲಾದ್ ಸಿಂಗ್ ಭರುಖೇಡಾ ಹೇಳಿದ್ದಾರೆ.
ಇದನ್ನೂ ಓದಿ: ರೈತ ಪ್ರತಿಭಟನೆಯನ್ನು ಮೋದಿ ಸರ್ಕಾರ ಮಣಿಸಲಾಗದು: 05 ಕಾರಣಗಳು