ವಿಷ್ಣು ಬಗ್ಗೆ ಅವಹೇಳನಕಾರಿ ಹೇಳಿಕೆ; ಕಣ್ಣೀರಿಟ್ಟು ಕ್ಷಮೆಯಾಚಿಸಿದ ವಿಜಯ ರಂಗರಾಜು!

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ, ಕನ್ನಡಿಗರು ಮತ್ತು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣನಾಗಿದ್ದ ತೆಲುಗು ನಟ ವಿಜಯ ರಂಗರಾಜು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ.

ತಮ್ಮ ಹೇಳಿಕೆಯ ಬಗ್ಗೆ ಕ್ಷಮೆಯಾಚಿಸಿ ವಿಡಿಯೋ ಶೇರ್ ಮಾಡಿರುವ ವಿಜಯ ರಂಗರಾಜು, ‘ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ ಬಗ್ಗೆ ನಾನು ಮಾತನಾಡಿ ತಪ್ಪು ಮಾಡಿದ್ದೇನೆ. ಮಾತನಾಡುವ ಭರದಲ್ಲಿ ಏನೇನೋ ಹೇಳಿಕೆ ನೀಡಿದ್ದೇನೆ. ದಯಮಾಡಿ ಕ್ಷಮಿಸಿ ಎಂದು ಕಣ್ಣೀರು ಹಾಕಿ ಕೈಮುಗಿದು ಕ್ಷಮೆ ಕೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ.

ವಿಜಯ ರಂಗರಾಜು ವಿರುದ್ಧ ಕನ್ನಡ ಚಿತ್ರರಂಗ ತಿರುಗಿಬಿದ್ದಿದ್ದು, ವಿಷ್ಣು ಅಭಿಮಾನಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಲೀಸರಿಗೆ ದೂರು ನೀಡಿ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದರು.

ನಟ ಜಗ್ಗೇಶ್, ಪುನೀತ್ ರಾಜಕುಮಾರ್, ಸುದೀಪ್, ಗಣೇಶ್, ಯಶ್, ನಿರ್ದೇಶಕ ಎಸ್. ನಾರಾಯಣ್, ಸಂಸದೆ ಸುಮಲತಾ ಸೇರಿದಂತೆ ಹಲವರು ವಿಜಯ ರಂಗರಾಜು ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಅವರು ಕೈಮುಗಿದು ಕ್ಷಮೆಯಾಚಿಸಿದ್ದಾರೆ.


ಇದನ್ನೂ ಓದಿ: ಸಾವಿತ್ರಿ ಬಾ ಪುಲೆ ಜನ್ಮದಿನದಂದು ಪತ್ರಿವರ್ಷ ‘ಸಾವಿತ್ರಿ ಉತ್ಸವ’ ಆಯೋಜನೆ: ಮಹಾರಾಷ್ಟ್ರ ಸರ್ಕಾರ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights