ದೆಹಲಿಯಲ್ಲಿ ರೈತರ ಧರಣಿಗೆ ಬೆಂಬಲಿಸಿ ಸಿಲಿಕಾನ್ ಸಿಟಿಯಲ್ಲಿಂದು ಮತ್ತೆ ಅನ್ನದಾತರ ಪ್ರತಿಭಟನೆ..!

ಸಿಲಿಕಾನ್ ಸಿಟಿಯಲ್ಲಿಂದು ಮತ್ತೆ ರೈತರು ಪ್ರತಿಭಟನೆಗೆ ಮುಂದಾಗಿದ್ದು ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಈ ಧರಿಣಿ ಕೈಗೊಂಡಿದ್ದಾರೆ.

ಇಂದಿನಿಂದ ಡಿಸೆಂಬರ್ 31ರವರೆಗೆ ಮೌರ್ಯ ಸರ್ಕಲ್ ನಲ್ಲಿ ಧರಣಿ ನಡೆಸಲಾಗುತ್ತಿದ್ದು, ನವದೆಹಲಿಯ ಗಡಿಯಲ್ಲಿ ರೈತರು ನಡೆಸುತ್ತಿರೋ ಪ್ರತಿಭಟನೆಗೆ ಬೆಂಬಲ ಸೂಚಿಸಿ ಈ ಪ್ರೋಟೆಸ್ಟ್ ಮಾಡಲಾಗುತ್ತಿದೆ. ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ, ರಾಜ್ಯ ದಲಿತ, ಕಾರ್ಮಿಕ, ರೈತ ಐಕ್ಯ ಹೋರಾಟ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಸಾಹಿತಿ ದೇವನೂರು ಮಹದೇವಪ್ಪ ಸೇರಿದಂತೆ ವಿವಿಧ ಸಂಘನೆಗಳ ಮುಖಂಡರುಗಳು ಭಾಗಿಯಾಗಲಿದ್ದಾರೆ. ಈ ಬಗ್ಗೆ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಲೀಟ್ ಮಾತನಾಡಿ, ರಾಜ್ಯ ದಲಿತ, ಕಾರ್ಮಿಕ, ರೈತ ಐಕ್ಯ ಹೋರಾಟ ಸಮಿತಿಯ 25 ಮಂದಿಯ ನಿಯೋಗ ನವದೆಹಲಿಗೆ ತೆರಳಿದ್ದು, 25 ಹಾಗೂ 26 ರಂದು ದೆಹಲಿಯಲ್ಲಿ ರೈತರು ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights