ತಿರುವನಂತಪುರಂನಲ್ಲಿ ಕೃಷಿ ವಿರೋಧಿ ಕಾನೂನು ಪ್ರತಿಭಟನೆ ಉದ್ಘಾಟಿಸಲಿರುವ ಕೇರಳ ಸಿಎಂ!

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಮತ್ತಷ್ಟು ಒತ್ತಡ ಹೇರಲು ರೈತ ಗುಂಪುಗಳು ಬಿಹಾರ ಮತ್ತು ಇತರ ರಾಜ್ಯಗಳಲ್ಲಿರುವವರಿಗೆ ಆಂದೋಲನಕ್ಕೆ ಸೇರಿಕೊಳ್ಳುವಂತೆ ಮನವಿ ಮಾಡಿವೆ. ಈ ಬೆನ್ನಲ್ಲೆ ತಿರುವನಂತಪುರಂನಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯ್ ಕೃಷಿ ವಿರೋಧಿ ಕಾನೂನು ಪ್ರತಿಭಟನೆ ಉದ್ಘಾಟಿಸಲಿದ್ದಾರೆ.

ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ವಾರಗಳಿಂದ ಕ್ಯಾಂಪಿಂಗ್ ಮಾಡುತ್ತಿರುವ ದೆಹಲಿ ಗಡಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾವಿರಾರು ರೈತರು ಮಹಾರಾಷ್ಟ್ರದಿಂದ ಹೊರಟಿದ್ದಾರೆ.

ದೆಹಲಿಯಲ್ಲಿ ಸೇರಲು ಉತ್ತರ ಪ್ರದೇಶದಿಂದ ಬರುವ ರೈತರನ್ನು ಮೊರಾದಾಬಾದ್ ಟೋಲ್ ಪ್ಲಾಜಾದಲ್ಲಿ ಪೊಲೀಸರು ತಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳು ಶೀಘ್ರದಲ್ಲೇ ತಮ್ಮ ಆಂತರಿಕ ಚರ್ಚೆಗಳನ್ನು ಪೂರ್ಣಗೊಳಿಸುತ್ತವೆ ಮತ್ತು ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರದೊಂದಿಗೆ ಮಾತುಕತೆಗಳನ್ನು ಪುನರಾರಂಭಿಸುತ್ತವೆ ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights