ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ? : ಡೆತ್ ನೋಟ್ ಪತ್ತೆ..!
ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ರಾಜಕೀಯ ವಲಯದಲ್ಲಿ ಅಘಾತವನ್ನುಂಟುಮಾಡಿದೆ.
ದೇವೇಗೌಡರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ. ಮಾತ್ರವಲ್ಲದೇ ಮೃತದೇಹ ಸಿಕ್ಕ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಪರಿಶೀಲನೆ ಮಾಡಲಾಗುತ್ತಿದೆ. ಎಸ್ ಎಲ್ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ಕೇಳಿದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಘಾತ ವ್ಯಕ್ತಪಡಿಸಿದ್ದಾರೆ. ಧರ್ಮೇಗೌಡರು ತಾಳ್ಮೆಯ ಸಭ್ಯ ವ್ಯಕ್ತಿಯಾಗಿದ್ದರು. ಅವರ ನಿಧನ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
It is shocking to learn the news of Deputy Speaker of State Legislative Council and JDS leader SL Dharmegowda's suicide. He was a calm and decent man. This is a loss of the state: HD Deve Gowda, former PM and JDS leader (File pic) https://t.co/3NHL9rJElz pic.twitter.com/BtdaLzjtwF
— ANI (@ANI) December 29, 2020
“ನಾನಂತೂ ಮಂತ್ರಯಾಗಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದ ಧರ್ಮೇಗೌಡ ಒಡಹುಟ್ಟಿದ ಸಹೋದರರಂತೆ ಇದ್ದರು” ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಹ ಎಸ್ ಎಲ್ ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಕೇಳಿ ವಿಷಾದ ವ್ಯಕ್ತಪಡಿಸಿದ್ದಾರೆ.
ವಿಧಾನಪರಿಷತ್ ಉಪಸಭಾಪತಿ, @Janatadal_S ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ.
— H D Kumaraswamy (@hd_kumaraswamy) December 29, 2020