TRS ಮತ್ತು ಕಾಂಗ್ರೆಸ್‌ ಮುಖಂಡರು BJP ಸೇರುತ್ತಾರೆ; ಸಿಎಂ ಕೆಸಿಆರ್‌ ಅವರನ್ನು ಜೈಲಿಗೆ ಕಳಿಸುತ್ತೇವೆ: ಬಿಜೆಪಿ ಅಧ್ಯಕ್ಷ

ಮುಂದಿನ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಜೊತೆ ಮೈತ್ರಿ ಮಾಡಬಹುದೆಂಬ ಐಹಾಪೋಹಗಳನ್ನು ಬಿಜೆಪಿ ತಳ್ಳಿಹಾಕಿದೆ. ತೆಲಂಗಾಣದಲ್ಲಿ ಟಿಆರ್‌ಎಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳದೇ, ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಬಿಜೆಪಿಯ ಮುಂದೆ ನಮಸ್ಕರಿಸಿದರೂ, ಬಿಜೆಪಿ ಹೈಕಮಾಂಡ್‌ ಅವರನ್ನು ಕ್ಷಮಿಸುವುದಿಲ್ಲ. “ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯನ್ನು ಜೈಲಿಗೆ ಹಾಕಲಾಗುವುದು” ಎಂದು ಅವರು ಹೇಳಿದ್ದಾರೆ.

ಟಿಆರ್‌ಎಸ್ ಸರ್ಕಾರ ಪಂಚಾಯತ್ ರಾಜ್ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದೆ. ಒಂದು ರೂಪಾಯಿ ಸಹ ರಾಜ್ಯದಿಂದ ಬಿಡುಗಡೆ ಮಾಡಿಲ್ಲ. “ಸ್ಥಳೀಯ ಸಂಸ್ಥೆಗಳನ್ನು ಕೇಂದ್ರ ನಿಧಿಯಿಂದ ನಡೆಸಲಾಗುತ್ತಿದೆ” ಹೀಗಾಗಿ, ಆಡಳಿತಾರೂಢ ಟಿಆರ್‌ಎಸ್‌ಗೆ ನಿಜಾಮಾಬಾದ್ ಜಿಲ್ಲೆಯಲ್ಲಿ ದೊಡ್ಡ ಹಿನ್ನಡೆಯಾಗಲಿದೆ, 10 ಎಂಪಿಟಿಸಿಗಳು, 10 ಸರ್ಪಂಚಗಳು ಮತ್ತು ಎಂಪಿಪಿಗಳು ಭಾನುವಾರ ಬಿಜೆಪಿಗೆ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2021ರ ಚುನಾವಣೆಗಳಲ್ಲಿ BJP ಹೀನಾಯವಾಗಿ ಸೋಲುತ್ತದೆ: ಕಾರಣವೇನು ಗೊತ್ತೇ?

ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಸರ್ಪಂಚ್‌ಗಳಿಗೆ ಮತ್ತು ಇತರ ಚುನಾಯಿತ ಪ್ರತಿನಿಧಿಗಳಿಗೆ ಟಿಆರ್‌ಎಸ್ ಸರ್ಕಾರ ಕಿರುಕುಳ ನೀಡುತ್ತಿದೆ. ಕೇಂದ್ರವು ಮಂಜೂರು ಮಾಡಿದ ಹಣವನ್ನು ರಾಜ್ಯ ಸರ್ಕಾರವು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ನಿಜಾಮಾಬಾದ್‌ನ ಡಿಚ್ಪಲ್ಲಿ ಮಂಡಲದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಬಿಜೆಪಿಗೆ ಸೇರಲಿದ್ದಾರೆ” ಎಂದು ಅವರು ಹೇಳಿದರು.

ಏತನ್ಮಧ್ಯೆ, ಬೋಧನ್ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಪಕ್ಷವನ್ನು ತೊರೆದಿದ್ದು, ಜನವರಿ 7 ರಂದು ಬೋಧನ್‌ನಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಮರ್ಯಾದಾ ಹತ್ಯೆ: ಅಂತರ್ಜಾತಿ ವಿವಾಹಕ್ಕೆ ವಿರೋಧ; ತಂಗಿಯ ಪತಿಯನ್ನೇ ಕೊಂದ ಸೋದರರು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights