ಸ್ಥಾನಮಾನ ಸಿಕ್ಕರೆ ಬಿಜೆಪಿಗೆ ಸೇರುತ್ತೇನೆ: ಶಾಸಕ ಎನ್‌ ಮಹೇಶ್‌

ಮೈತ್ರಿ ಸರ್ಕಾರ ಪತನದ ಸಂದರ್ಭದಲ್ಲಿ ಬಿಎಸ್‌ಪಿ ಆದೇಶವನ್ನು ಉಲ್ಲಂಘಿಸಿ ಸದನಕ್ಕೆ ಗೈರಾಗಿ, ಪಕ್ಷದಿಂದ ಉಚ್ಛಾಟನೆಗೊಂಡಿರುವ ಶಾಸಕ ಎನ್‌ ಮಹೇಶ್‌ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡರುವ ನೀಡಿರುವ ಎನ್‌ ಮಹೇಶ್‌, “ಸ್ಥಾನಮಾನ ಸಿಕ್ಕಿದರೆ ಬಿಜೆಪಿಗೆ ಸೇರುವುದು ಖಂಡಿತ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಂದು ಸ್ಥಾನಮಾನ ಸಿಕ್ಕಿದರೆ, ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎಂಬ ಅಪೇಕ್ಷೆಯನ್ನು ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆದಿಲ್ಲ” ಎಂದರು.

“ಬಿಜೆಪಿ ಸೇರ್ಪಡೆ ಬಗ್ಗೆ ನಾನು ಇನ್ನೂ ಖಚಿತ ನಿರ್ಧಾರ ಕೈಗೊಂಡಿಲ್ಲ. ಸಂಕ್ರಾಂತಿ ಕಳೆಯಲಿ. ನಂತರ ನೋಡೋಣ. ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೆ ಅಂತಹ ಸಂದರ್ಭ ಸೃಷ್ಟಿಯಾಗಬೇಕು. ನಾನಾಗಿಯೇ ತೀರ್ಮಾನ ಕೈಗೊಳ್ಳುವುದಕ್ಕೆ ಆಗುವುದಿಲ್ಲ” ಎಂದು ಹೇಳಿದ್ದಾರೆ ಎಂಬುದಾಗಿ ಪ್ರಜಾವಾಣಿ ವರದಿ ಮಾಡಿದೆ.


ಇದನ್ನೂ ಓದಿ: ಬಿಎಸ್‌ವೈ ಮೇಲೆ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳದ BJP: ಯಾಕೆ ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights