ಸಿಲಿಕಾನ್ ಸಿಟಿಯಲ್ಲಿ ಗುಂಡಿನ ಸದ್ದು : ರೌಡಿ ಕಾಲಿಗೆ ಗುಂಡೇಟು, ಅರೆಸ್ಟ್…!

ಸುಲಿಗೆ, ಜೀವ‌ ಬೆದರಿಕೆ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಯೋರ್ವನ ಕಾಲಿಗೆ ಗುಂಡು ಹಾರಿಸುವ ಮೂಲಕ ಬೆಂಗಳೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.

ನಗರದಲ್ಲಿ ಸುಲಿಗೆ, ಜೀವ‌ ಬೆದರಿಕೆ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿ ಕಾರ್ತಿಕ್ ಅಲಿಯಾಸ್ ಗುಂಡ (21 ವರ್ಷ) ಎಂಬಾತನನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಗುಂಡು ಹಾರಿಸಿ ಬುಧವಾರ ತಡರಾತ್ರಿ ಸೆರೆ ಹಿಡಿದಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರನ್ನು ಸುಲಿಗೆ‌ ಮಾಡಿದ್ದ ಗುಂಡ, ತಲೆಮರೆಸಿಕೊಂಡು ಓಡಾಡುತ್ತಿದ್ದ. 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಗುಂಡನ ಹೆಸರು, ಶ್ರೀರಾಮಮಪುರ ಠಾಣೆ ರೌಡಿ ಪಟ್ಟಿಯಲ್ಲಿದೆ. ತಲೆಮರೆಸಿಕೊಂಡಿದ್ದ ಆರೋಪಿ, ಓಕಳಿಪುರ ಬಳಿ ಬುಧವಾರ ರಾತ್ರಿ ಕಾಣಿಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ತಂಡ, ಸ್ಥಳಕ್ಕೆ ಹೋಗಿ ಆರೋಪಿಯನ್ನು ಹಿಡಿಯಲು ಮುಂದಾಗಿತ್ತು. ಕಾನ್‌ಸ್ಟೆಬಲ್ ಉಮೇಶ್ ಎಂಬುವರ ಮೇಲೆಯೇ ಹಲ್ಲೆ ಮಾಡಿದ್ದ ರೌಡಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಇದೇ ವೇಳೆಯೇ ಪಿಎಸ್‌ಐ ನಿತ್ಯಾನಂದಾಚಾರಿ, ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದರು. ಕುಸಿದು ಬಿದ್ದ ರೌಡಿಯನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯದಲ್ಲಿ ಚೇತರಿಕೆ‌ ಕಂಡುಬಂದ ನಂತರ ಕಸ್ಟಡಿಗೆ ಪಡೆದು ವಿಚಾರಣೆ ‌ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights