ಕಾರುಗಳ ಮಧ್ಯೆ ಭೀಕರ ಅಪಘಾತ: ಇಬ್ಬರು ಸಾವು; ಆರು ಜನರ ಸ್ಥಿತಿ ಗಂಭೀರ

ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೇರೆ ತಾಲೂಕಿನ ರಂಗೇನಹಳ್ಳಿ ಸಮೀಪ ನಡೆದಿದೆ.

ರಂಗೇನಹಳ್ಳಿ ಸಮೀಪದ ಹಲಸೂರು ಕೆರೆ ಏರಿ ರಸ್ತೆಯಲ್ಲಿ ಲಕ್ಕವಳ್ಳಿಯಿಂದ ಹಾಗೂ ತರೀಕೆರೆಯಿಂದ ತೆರಳುತ್ತಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯಿಂದಾಗಿ ಎರಡು ಕಾರುಗಳು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಗಾಯಗೊಂಡಿದ್ದ ಆರು ಜನರನ್ನು ತರೀಕೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಇದನ್ನೂ ಓದಿ: ಒಂದು ಸಿಸಿ ಕ್ಯಾಮರಾ ಬೆಲೆ 8 ಲಕ್ಷ: ಬೆಂಗಳೂರು ಸೇಪ್ ಸಿಟಿಯೋ? ಹಗರಣಗಳ ಸಿಟಿಯೋ? ಎಎಪಿ ಪ್ರಶ್ನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights