ಕೊನೆಗೂ ಬಾಲಾಕೋಟ್ ಏರ್ಸ್ಟ್ರೈಕ್ ನಲ್ಲಿ 300 ಉಗ್ರರು ಸಾವನ್ನಪ್ಪಿದ್ದು ನಿಜ ಎಂದ ಪಾಕಿಸ್ತಾನ..!
ಪುಲ್ವಾಮಾ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರ ಸಾವಿಗೆ ಪ್ರತಿಯಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಏರ್ಸ್ಟ್ರೈಕ್ ಮಾಡಿತ್ತು. ಆದರೆ ಬಾಲಾಕೋಟ್ ಏರ್ಸ್ಟ್ರೈಕ್ ನಲ್ಲಿ ಯಾರೊಬ್ಬರೂ ಸಾವನ್ನಪ್ಪಿಲ್ಲ ಎಂದಿದ್ದ ಪಾಕಿಸ್ತಾನ ಕೊನೆಗೂ ಸತ್ಯವನ್ನು ಒಪ್ಪಿಕೊಂಡಿದೆ.
ಹೌದು.. ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ಮೇಲೆ ಏರ್ಸ್ಟ್ರೈಕ್ ಮಾಡಿ ಫೆ.26ಕ್ಕೆ ಎರಡು ವರ್ಷ ಪೂರ್ಣಗೊಳ್ಳುತ್ತದೆ. 2019 ರ ಫೆಬ್ರವರಿ 26 ರಂದು ನಡೆದ ಭಾರತೀಯ ವಾಯುಪಡೆ ದಾಳಿಯಲ್ಲಿ 300 ಉಗ್ರರು ಸತ್ತಿರುವುದು ನಿಜ ಎಂದು ಪಾಕಿಸ್ತಾನ ಕೊನೆಗೂ ಸತ್ಯ ಒಪ್ಪಿಕೊಂಡಿದೆ.
ಉರಿ ಸೆಕ್ಚರ್ ನಲ್ಲಿನ ಉಗ್ರ ದಾಳಿಯಲ್ಲಿ ಭಾರತೀಯ ಸೇನೆಯ 30 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಅಂತಾರಾಷ್ಟ್ರೀಯ ಗಡಿಯನ್ನ ದಾಟಿ ಪಾಕ್ ಆಕ್ರಮಿತ ಕಾಶ್ಮೀರದ ಬಾಲಾಕೋಟ್ ಉಗ್ರ ತರಬೇತಿ ಶಿಬಿರಗಳ ಮೇಲೆ ಬಾಂಬ್ ಗಳ ಸುರಿಮಳೆ ಗೈದಿತ್ತು. ಇದರಲ್ಲಿ 300 ಸಾವುಗಳಾಗಿದ್ದವು. ನಮ್ಮ ಗುರಿ ಅವರ ಗುರಿಗಿಂತಲೂ ವಿಭಿನ್ನವಾಗಿತ್ತು. ನಾವು ಅವರ ಹೈಕಮಾಂಡ್ನ್ನು ಗುರಿಯಾಗಿಸಿದ್ದೆವು. ನಮ್ಮದು ನ್ಯಾಯಯುತ ಗುರಿಯಾಗಿತ್ತು. ನಾನು ಪರೋಕ್ಷವಾಗಿ ಸರ್ಜಿಕಲ್ ಸ್ಟ್ರೈಕ್ನ್ನು ಒಪ್ಪಿಕೊಂಡಿದ್ದೇವೆ. ಅದರಲ್ಲಿ ಯಾವುದೇ ಸಾವು ನೋವಾಗಿಲ್ಲ ಎಂದು ಅಘಾ ಹಿಲಾಲಿ ಹೇಳಿಕೆ ನೀಡಿದ್ದಾರೆ.
ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರರು ಹಾಕಿದ್ದ ಕ್ಯಾಂಪ್ ಮೇಲೆ ಭಾರತೀಯ ಸೇನೆ ಏರ್ ಸ್ಟ್ರೈಕ್ ನಡೆಸಿತ್ತು., ಈ ಸಂದರ್ಭದಲ್ಲಿ ದಾಳಿ ವೇಳೆ ಪಾಕ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಿಕೆ ನೀಡಿತ್ತು. ಪುಲ್ವಾಮಾದಲ್ಲಿ 40 ಸೈನಿಕರ ಮೇಲೆ ಉಗ್ರರು ನಡೆಸಿದ್ದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಈ ದಾಳಿ ನಡೆಸಿತ್ತು.
ಇದೀಗ ಭಾರತೀಯ ಸೇನೆ ಈ ಹಿಂದೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ ಸುಮಾರು 300 ಉಗ್ರರು ಹತರಾಗಿರುವುದು ನಿಜ ಎಂದು ಪಾಕ್ ಕೊನೆಗೂ ಸತ್ಯ ಒಪ್ಪಿಕೊಂಡಿದೆ.