ರೈತರ ಹೋರಾಟ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ: ಹೋರಾಟಗಾರ್ತಿ ಮೇಧಾ ಪಾಟ್ಕರ್‌

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಈ ಬೃಹತ್ ಹೋರಾಟ ದೇಶದ ಪ್ರಜಾಪ್ರಭುತ್ವವನ್ನು ಬಲಗೊಳಿಸುತ್ತಿದೆ ಎಂದು ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಹೇಳಿದ್ದಾರೆ.

ಜೈಪುರ-ದೆಹಲಿ ಗಡಿಯಲ್ಲಿರುವ ಶಹಜಹಾನ್‌ಪುರದಲ್ಲಿ ಹೋರಾಟ ನಡೆಸುತ್ತಿರುವ‌ ರೈತರನ್ನು ಭೇಟಿ ಮಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ರೈತ ವಿರೋಧಿ ಕಾನೂನುಗಳನ್ನು ಲಾಕ್‌ಡೌನ್‌ ಅವಧಿಯಲ್ಲಿ ಅವಸರದಲ್ಲಿ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೇಧಾ ಪಾಟ್ಕರ್‌ ಅವರು, ” ಇತ್ತ ಬಿಜೆಪಿ ಸರ್ಕಾರ ಕಾನೂನುಗಳನ್ನು ಜಾರಿಗೆ ತಂದು, ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಇದೇ ಪಕ್ಷದ ಮುಖ್ಯಮಂತ್ರಿ ಶಿವರಾಜ್‌ ಸಿಂಘ್‌ ಚೌಹಾಣ್‌‌, ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಬರಲಿ ಅವರನ್ನು ಬಂಧಿಸಲಾಗುವುದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಬಿಜೆಪಿ ಉದ್ದೇಶವನ್ನು ಸ್ಪಷ್ಟವಾಗಿ ತಿಳಿಸುತ್ತದೆ” ಎಂದು ಹೇಳಿದರು.

‘ಇಂಥ ಕಾನೂನು ವಿರೋಧಿಸಿ ರೈತರು ನಡೆಸಿರುವ ಈ ಮಹಾ ಹೋರಾಟ, ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತದೆ ಮತ್ತು ಶೋಷಿತರು ದನಿ ಎತ್ತುವುದಕ್ಕೆ ನೆರವಾಗುತ್ತಿದೆ’ ಎಂದು ಹೇಳಿದರು.


ಇದನ್ನೂ ಓದಿ: ಕಾರ್ಪೋರೇಟ್‌ಗಳ ಒತ್ತಾಯದಿಂದ ಮೋದಿ ಸರ್ಕಾರ ಕೃಷಿ ನೀತಿಗಳನ್ನು ಜಾರಿಗೆ ತಂದಿದೆ: ಸೆಲ್ವ ಮುತ್ತು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights