ಹರಿಯಾಣದಲ್ಲಿ ರೈತರ ಮೇಲೆ ಅಶ್ರುವಾಯು, ಲಾಠಿ ಪ್ರಯೋಗಿಸಿದ ಪೊಲೀಸರು..!

ಮೂರು ಹೊಸ ಕೃಷಿ ವಿರೋಧಿ ಕಾನೂನುಗಳ ವಿರುದ್ಧ ಒಂದುವರೆ ತಿಂಗಳಿನಿಂದ ಪ್ರತಿಭಟನೆ ಮುಂದುವರೆಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು ಜನಾಕ್ರೋಶಕ್ಕೆ ಗುರಿಯಾಗಿದೆ.

ಇಂದು ಹೊಸ ಕೃಷಿ ಕಾನೂನುಗಳಿಂದ ರೈತರಿಗಾಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಲು ಮುಖ್ಯಮಂತ್ರಿ ಮನೋಹರ್ ಲಾಲ್  ಕೆಮಲಾ ಹಳ್ಳಿಯಲ್ಲಿ ಮಾತನಾಡಬೇಕಿತ್ತು. ಇದಕ್ಕಾಗಮಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿದ್ದಾರೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಕೆಮಲಾ ಹಳ್ಳಿಗೆ ಬರಲು ಪ್ರಯತ್ನಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲ ಫಿರಂಗಿ ಪ್ರಯೋಗಿಸಿರುವ ದೃಶ್ಯಾವಳಿಗಳು ಮೊಬೈಲ್ ಗಳಲ್ಲಿ ಸೆರೆಯಾಗಿದೆ.

ನೂರಾರು ಸಂಖ್ಯೆಯಲ್ಲಿದ್ದ ರೈತರು, ಕೃಷಿ ಕಾನೂನುಗಳನ್ನು ರದ್ದುಪಡಿಸಿ ಎಂಬ ಘೋಷಣೆ ಕೂಗುತ್ತಾ, ಮೆರವಣಿಗೆ ಆರಂಭಿಸಿದಾಗ ಪೊಲೀಸರು ಆಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಿದ್ದಾರೆ. ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಪ್ರಯೋಗಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights