ಕೃಷಿ ಕಾಯ್ದೆಗಳಿಗೆ ವಿರೋಧ; ಸ್ಪೀಕರ್‌ಗೆ ರಾಜೀನಾಮೆ ಪತ್ರ ಬರೆದ ಶಾಸಕ!

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಪಕ್ಷದ ಶಾಸಕ ಅಭಯ್ ಸಿಂಗ್​ ಚೌತಾಲಾ ಅವರು ಚಂಡೀಘಡ ವಿಧಾನಸಭೆಗೆ ರಾಜೀನಾಮೆ ನೀಡಿ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಕೃಷಿ ನೀತಿಗಳನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು. ಹಿಂಪಡೆಯದಿದ್ದರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅಂಭಯ್‌ ಸಿಂಗ್‌ ಈ ಹಿಂದೆ ಹೇಳಿದ್ದರು.

ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಕೊನೆಗೂ ಹಿಂತೆಗೆದುಕೊಂಡಿಲ್ಲ. ರೈತರ ಪ್ರತಿಭಟನೆಗೆ ಬೆಂಬಲ ನೀಡುವ ನಿಟ್ಟಿನಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪರಿಗಣಿಸಿ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಕಳೆದ 47 ದಿನಗಳಿಂದ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಲ್ಲ ವಿರೋಧ ಆದರೂ ಕೇಂದ್ರ ಸರ್ಕಾರ ಈ ಕಾನೂನುಗಳನ್ನು ಅಸಂವಿಧಾನಿಕ ರೀತಿ ಅಂಗೀಕರಿಸಿದೆ ಎಂದು ಅವರು ಕಿಡಿ ಕಾರಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಕಿಡಿ ಜಗಮೋಹನ್‌ ಸಿಂಗ್‌ ಪಟಿಯಾಲ; ಇವರು ಯಾರು ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights