ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ ಎಂಬುದು ಸುಳ್ಳು: ಬ್ರಾಹ್ಮಣರಿಗಿರುವ 15 ಯೋಜನೆಗಳು ಇಲ್ಲಿವೆ!

ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ. ಹಾಗಾಗಿ ಅವರು ಹಿಂದುಳಿಯುತ್ತಿದ್ದಾರೆ ಎಂಬ ಆರೋಪ ಅಲ್ಲಲ್ಲಿ ಕೇಳಿಬರುತ್ತದೆ. ಅದು ಸುಳ್ಳು, ಅವರಿಗೂ ಮೀಸಲಾತಿ ಇದೆ. ಅವರಿಗಾಗಿ ರಾಜ್ಯ ಸರ್ಕಾರದ 15 ಯೋಜನೆಗಳಿವೆ ಎಂದು ಪತ್ರಕರ್ತ ನವೀನ್ ಸೂರಿಂಜೆಯವರು ತಮ್ಮ ಫೇಸ್‌ಬುಕ್‌ನಲ್ಲಿ ಆಧಾರ ಸಹಿತ ವರದಿಯೊಂದನ್ನು ಬರೆದಿದ್ದಾರೆ.

“ಎಲ್ಲವೂ ದಲಿತರಿಗೇ ಕೊಟ್ರು. ಮೀಸಲಾತಿಯಲ್ಲಿ ಶಿಕ್ಷಣ, ಕೆಲಸ, ಊಟ ಎಲ್ಲವೂ ದಲಿತರಿಗೇ. ಹಾಗಾದರೆ ಉಳಿದ ಹಿಂದುಗಳೂ ಏನು ಮಾಡಬೇಕು” ಎಂದು ಹಿಂದುಳಿದ ವರ್ಗದ ಹಿಂದೂಗಳನ್ನು ಎತ್ತಿಕಟ್ಟಿದ್ದೇ ಬ್ರಾಹ್ಮಣರು. ಹೀಗೆ ಹೇಳುತ್ತಲೇ ಎಲ್ಲಾ ಸರಕಾರಿ ಯೋಜನೆಗಳನ್ನು ತನ್ನದಾಗಿಸಿಕೊಂಡವರು ಬ್ರಾಹ್ಮಣರು. ಬ್ರಾಹ್ಮಣರಿಗೆ ಕರ್ನಾಟಕ ರಾಜ್ಯ ಸರ್ಕಾರವೊಂದೇ ನೀಡುವ ಯೋಜನೆಗಳೇನು ಎಂಬುದನ್ನು ನೋಡಿದರೆ ತಲೆ ತಿರುಗುತ್ತದೆ.

1. ಸುಭದ್ರ ಯೋಜನೆ
ಬ್ರಾಹ್ಮಣ ಸಮುದಾಯದ ಅನಾಥ/ನಿರಾಶ್ರಿತ ಅಂಗವಿಕಲ, ವಿಧವೆ ಮಹಿಳೆಯರು , ಹಿರಿಯ ನಾಗರೀಕರಿಗೆ ಮಾಸಿಕ ಪಿಂಚಣಿ.

2. ಸೌಖ್ಯ ಯೋಜನೆ
ನಿರಾಶ್ರಿತರಾದ ಬ್ರಾಹ್ಮಣ ವಿಧವೆ ಹಾಗೂ ಹಿರಿಯ ನಾಗರೀಕರಿಗೆ ಆಶ್ರಯ ಕಲ್ಪಿಸಲು ವೃದ್ಧಾಶ್ರಮಗಳ ಸ್ಥಾಪನೆ/ವೃದ್ಧಾಶ್ರಮ ವೆಚ್ಚ ಮರುಪಾವತಿ ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವುದು.
ಅರ್ಹ ಬ್ರಾಹ್ಮಣರಿಗೆ ಉಚಿತ ವೈದ್ಯಕೀಯ ತಪಾಸಣೆ ಆಯೋಜಿಸುವುದು. ಅರ್ಹ ಬ್ರಾಹ್ಮಣರಿಗೆ ಉಚಿತ ಕಾನೂನು ಸಲಹೆ ಮತ್ತು ಮಾರ್ಗದರ್ಶನ ಪಡೆಯುವ ಸೇವೆಗಳನ್ನು ಆಯೋಜಿಸುವುದು.

3. ಕಲ್ಯಾಣ ಯೋಜನೆ:
ಬ್ರಾಹ್ಮಣರಿಗಾಗಿ ಸಾಮೂಹಿಕ ವಿವಾಹ/ಉಪನಯನಗಳನ್ನುಆಯೋಜಿಸುವುದು.
ಬಿಪಿಎಲ್ ಬ್ರಾಹ್ಮಣ ಕುಟುಂಬದ ಕೃಷಿಕರನ್ನು/ ಅಡಿಗೆಯವರನ್ನು/ ಪುರೋಹಿತರನ್ನು ಮದುವೆಯಾಗುವ ವಧುವಿನ ಹೆಸರಲ್ಲಿ ಮೂರು ಲಕ್ಷ ರೂಪಾಯಿ ಮೊತ್ತದ ವಿತ್ತಬಾಂಡ್ ವಿತರಿಸುವುದು.

4. ಚೈತನ್ಯ ಉತ್ಸವ ಯೋಜನೆ:
ಬ್ರಾಹ್ಮಣ ಸಮುದಾಯದ ಯುವ ಪೀಳಿಗೆಯ ಯುವ ಸಂಘಟನೆ ಹಾಗೂ ಅಭಿವೃದ್ಧಿಗಾಗಿ ಉತ್ಸವಗಳನ್ನು ಆಯೋಜಿಸುವುದು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಬ್ರಾಹ್ಮಣ ಯುವಕ-ಯುವತಿಯರಿಗೆ ಪ್ರೋತ್ಸಾಹ ಹಾಗೂ ಸಹಾಯಧನ ಪಾವತಿ.

5. ಕಿರುಸಾಲ ಯೋಜನೆ:
ಸಣ್ಣ ಪುಟ್ಟ ಗೃಹ ಉದ್ಯಮ ಮಾಡುತ್ತಿರುವ ಬ್ರಾಹ್ಮಣ ಸಮುದಾಯಕ್ಕೆ ನೆರವು ನೀಡುವ ಉದ್ದೇಶದಿಂದ ಕಿರು ಸಾಲ ಯೋಜನೆಯನ್ನು ಮಂಡಳಿ ಜಾರಿಗೆ ತಂದಿದೆ. 50 ಸಾವಿರ ರೂ. ಸಾಲ ನೀಡಲಿದ್ದು, ಈ ಸಾಲಕ್ಕೆ ಮಂಡಳಿಯ ವತಿಯಿಂದ 10 ಸಾವಿರ ಸಹಾಯಧನ ನೀಡಲಾಗುವುದು.

6. ಸಾಂದೀಪನಿ ಶಿಷ್ಯವೇತನ ಯೋಜನೆ:
ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ಕೋರ್ಸ್ ಗಳನ್ನು ಕಲಿಯುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ಪಾವತಿ ಮಾಡುವುದು.

ಭಾರತದಲ್ಲಿ ಹಾಗೂ ಹೊರ ದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಅತೀ ಕಡಿಮೆ / ಶೂನ್ಯ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು. ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ(Day Scholar/ hosteller Maintenance) ಹಾಗೂ ಶುಲ್ಕ ಮರುಪಾವತಿ(Fee Reimbursement) ಒದಗಿಸುವುದು.

7. ಆಚಾರ್ಯತ್ರಯ ವೇದ ಶಿಷ್ಯವೇತನ ಯೋಜನೆ :
ಬ್ರಾಹ್ಮಣ ಸಮುದಾಯದ ವೇದ ವಿದ್ಯಾರ್ಥಿಗಳಿಗೆ/ಆಗಮ ವಿದ್ಯಾರ್ಥಿಗಳಿಗೆ /ಆಗಮಿಕರಿಗೆ ಮತ್ತು ಸಂಸ್ಕೃತ ವಿದ್ಯಾರ್ಥಿಗಳಿಗೆ/ವಿದ್ವಾಂಸರಿಗೆ ಶಿಷ್ಯ ವೇತನ ನೀಡುವುದು.

8. ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ :
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳ ಬ್ರಾಹ್ಮಣ ಸಾಧಕರಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುವುದು.

9. ಚಾಣಕ್ಯ ಆಡಳಿತ ತರಬೇತಿ ಯೋಜನೆ :
ಐ.ಎ.ಎಸ್, ಐ.ಪಿ.ಎಸ್, ಐ.ಎಫ್.ಎಸ್, ಐ.ಆರ್.ಎಸ್, ಕೆ.ಎ.ಎಸ್, ಇತ್ಯಾದಿ ಪರೀಕ್ಷೆಗಳ ಪ್ರಾಥಮಿಕ ಹಂತದ ಪರೀಕ್ಷೆ ಉತ್ತೀರ್ಣರಾದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವುದು.

10. ಸನ್ನಿಧಿ ಯೋಜನೆ :

ಅರ್ಹ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ & ಉಚಿತ ಹಾಸ್ಟಲ್ ನಿರ್ಮಾಣ/ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವುದು / ಹಾಸ್ಟಲ್ ಶುಲ್ಕವನ್ನು ಮರು ಪಾವತಿಸುವುದು.
ಬ್ರಾಹ್ಮಣ ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟಲ್ ಗಳ ನಿರ್ಮಾಣ.

11. ಸರ್ ಎಂ. ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ:

ಬ್ರಾಹ್ಮಣರಿಗೆ ಉದ್ಯೋಗ/ಸ್ವಯಂ ಉದ್ಯೋಗ/ಕೌಶಲ್ಯಾಭಿವೃದ್ಧಿಗಾಗಿ ಉದ್ಯೋಗಮೇಳಗಳನ್ನು ಆಯೋಜಿಸುವುದು, ತರಬೇತಿ ಕೇಂದ್ರಗಳನ್ನು ತೆರೆಯುವುದು. ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಅಕೌಂಟೇನ್ಸಿ, ಕಂಪನಿ ಸೆಕ್ರೇಟರಿ ಇನ್ನಿತರ ವೃತ್ತಿಪರ ಪರೀಕ್ಷೆಗಳಿಗೆ ಉಚಿತ ಶಿಕ್ಷಣ / ತರಬೇತಿ.
ಸಿ.ಇ.ಟಿ, ಜೆ.ಇ.ಇ, ನೀಟ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ತರಬೇತಿ ನಡೆಸುವುದು.

12. ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕೆಗಾಗಿ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ.

13. ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ ಹಣಕಾಸಿನ ನೆರವು

14. ಪುರುಷೋತ್ತಮ ಯೋಜನೆ:

ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ. ಸ್ವಯಂ ಉದ್ಯೋಗ / ನವೋದ್ಯಮ (Start-ups) ಪ್ರಾರಂಭಿಸಲು ಇಚ್ಛಿಸುವ ಅರ್ಹ ಬ್ರಾಹ್ಮಣ ಉದ್ಯಮಿಗಳಿಗೆ ಆರಂಭಿಕ ಸಹಾಯ ಧನ ನೀಡುವುದು.
ಬ್ರಾಹ್ಮಣರಿಗಾಗಿ ಸಂಶೋಧನೆ ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು.
ಬ್ರಾಹ್ಮಣರಿಗಾಗಿ ಔದ್ಯಮಿಕ ಪೂರ್ವಪಾಲನಾ ಕೇಂದ್ರ (Business Incubation Centres)

15. ಅನ್ನದಾತ ಯೋಜನೆ:

ಕೃಷಿ ಆಧಾರಿತ ಉದ್ಯಮಗಳನ್ನು ಸ್ಥಾಪಿಸಲು ಕಡಿಮೆ ಬಡ್ಡಿ ದರಗಳಲ್ಲಿ ಅರ್ಹ ಬ್ರಾಹ್ಮಣ ರೈತರಿಗೆ ಸಾಲ ಒದಗಿಸುವುದು. ವ್ಯವಸಾಯಕ್ಕಾಗಿ ತೆರೆದ ಬಾವಿ ಅಥವಾ ಬೋರ್ ವೆಲ್ ಗಳನ್ನು ಕೊರೆಯಲು ಅರ್ಹ ಬ್ರಾಹ್ಮಣ ರೈತರಿಗೆ ಸಹಾಯ ಧನ ಒದಗಿಸುವುದು. ಹೈನುಗಾರಿಕೆ ಹಾಗೂ ಕೃಷಿಆಧಾರಿತ ಚಟುವಟಿಕೆಗಳಿಗೆ ಬ್ರಾಹ್ಮಣ ರೈತರಿಗೆ ಸಹಾಯಧನ ಮತ್ತು ತರಬೇತಿ.

ಇದನ್ನೂ ಓದಿ: ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಪಂಜಾಬ್‌ ಸರ್ಕಾರ ನಿರ್ಧಾರ!

ಇದ್ಯಾವುದೂ ಹಿಂದೂಗಳಿಗಾಗಿನ ಯೋಜನೆಯಲ್ಲ. ಕೇವಲ ಬ್ರಾಹ್ಮಣರಿಗಾಗಿನ ಯೋಜನೆಗಳು. ಎಲ್ಲವನ್ನೂ ದಲಿತರಿಗೇ ಮೀಸಲಿರಿಸಿದರು ಎಂದು ಬಹುಸಂಖ್ಯಾತ ಹಿಂದೂಗಳನ್ನು ಎತ್ತಿಕಟ್ಟಿ ರಾಜಕೀಯವಾಗಿ ಪ್ರಭಾವಿಗಳಾದ ಬ್ರಾಹ್ಮಣ ಸಮುದಾಯ ಪಡೆಯುತ್ತಿರುವ ಯೋಜನೆಗಳಿವು. ಖಂಡಿತವಾಗಿಯೂ ಬ್ರಾಹ್ಮಣರು ಈ ಯೋಜನೆಗಳ ಸದುಪಯೋಗ ಪಡೆಯಲಿ. ಆದರೆ ಶತಶತಮಾನಗಳಿಂದ ಹಿಂದುಳಿದ ಸಮುದಾಯಗಳು ಇದೇ ಯೋಜ‌ನೆಯನ್ನು ಪಡೆದಾಗ ಬ್ರಾಹ್ಮಣರ ಪ್ರತ್ಯಕ್ಷ ಮತ್ತು ಪರೋಕ್ಷ ಪ್ರತಿಕ್ರಿಯೆಗಳು ಎಷ್ಟು ಅಪಾಯಕಾರಿಯಾಗಿದ್ದವು ಎಂಬುದನ್ನು ಬ್ರಾಹ್ಮಣರ ಮಾತನ್ನೇ ವೇದವಾಕ್ಯ ಎಂದುಕೊಂಡ ಹಿಂದುಳಿದ ವರ್ಗಗಳು ತಿಳಿದುಕೊಳ್ಳಲಿ.

ವಿಪರ್ಯಾಸ ಎಂದರೆ, ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಿಂದಿನ ಸಿದ್ದರಾಮಯ್ಯ ಸರಕಾರ ಜಾತಿ ಜನಗಣತಿ ಮಾಡಲು ಮುಂದಾದಾಗ ಕಾಂಗ್ರೆಸ್ ಮತ್ತು ಬಿಜೆಪಿಯ ಬ್ರಾಹ್ಮಣರು ವಿರೋಧ ವ್ಯಕ್ತಪಡಿಸಿದ್ದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳು ಮತ್ತು ದಲಿತರು ಸರಕಾರಿ ಯೋಜನೆಯನ್ನು ಪಡೆದುಕೊಳ್ಳಬಹುದು ಎಂಬ ಭಯದಿಂದ ಜಾತಿಜನಗಣತಿಯನ್ನು ವಿರೋಧಿಸಿದ್ದರು. ಬ್ರಾಹ್ಮಣರ ಮಾತುಗಳಿಗೆ ಬಲಿಯಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಹಿಂದೂ ಮುಖಂಡರೂ ಜಾತಿ ಜನಗಣತಿಯನ್ನು ವಿರೋಧಿಸಿದ್ದರು. ಇದೀಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ಬ್ರಾಹ್ಮಣ ಸಮುದಾಯದ ಬಗ್ಗೆ ರಾಜ್ಯಾದ್ಯಂತ ಗಣತಿಗೆ ನಿರ್ಧರಿಸಲಾಗಿದೆ.

ಜಾತಿ ಆಧರಿತ ಮೀಸಲಾತಿಯನ್ನು ವಿರೋಧಿಸುವ ಹಿಂದೂ ಸಂಘಟನೆಗಳು ಮತ್ತು ಅದರಲ್ಲಿ ಹಿಂದುಳಿದ ವರ್ಗಗಳ ನಾಯಕರು, ಕಾರ್ಯಕರ್ತರು ಈಗ ಏನನ್ನುತ್ತಾರೆ ? ಇನ್ನಾದರೂ ಈ ಪಿತೂರಿಗಳ ಬಗ್ಗೆ ಅರಿತುಕೊಳ್ಳುವುದು ಒಳ್ಳೆಯದು.

ಕೃಪೆ: ನವೀನ್ ಸೂರಿಂಜೆಯವರ ಫೇಸ್‌ಬುಕ್ ನಿಂದ.
(ಯೋಜನೆಗಳ ಮಾಹಿತಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ)


ಇದನ್ನೂ ಓದಿ: ಒಳಮೀಸಲಾತಿಯ ತತ್ವವಿಲ್ಲದೇ ಮೀಸಲಾತಿಗೆ ಸತ್ವವಿರದು: ಅಧ್ಯಯನ ಬರಹ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights