BJPಯಿಂದ ಇಡೀ ದೇಶವೇ ನಿರುದ್ಯೋಗಿಯಾಗಿದೆ; ಇದಕ್ಕೆ ಪ್ರತಿಪಕ್ಷ ಹೊರತಲ್ಲ: ಅಶೋಕ್‌ಗೆ ಡಿಕೆಶಿ ತಿರುಗೇಟು

ಸಚಿವರೊಬ್ಬರು ನಾವು ನಿರುದ್ಯೋಗಿಗಳಾಗಿದ್ದೇವೆ, ಉದ್ಯೋಗ ಹುಡುಕುತ್ತಾ ಅಲೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ನಿಜ, ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿಯಾಗಿದ್ದು, ಇದಕ್ಕೆ ವಿರೋಧ ಪಕ್ಷವಾದ ನಾವೂ ಹೊರತಾಗಿಲ್ಲ. ನಾವೂ ನಿರುದ್ಯೋಗಿಗಳೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್‌ ಜ.20ರಂದು ಕೃಷಿ ಕಾಯ್ದೆಗಳ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಂದಾಯ ಸಚಿವ ಆರ್‌.ಅಶೋಕ್‌, ಕಳೆದ ಆರು ವರ್ಷದಲ್ಲಿ ನರೇಂದ್ರ ಮೋದಿಗೆ ಬಗ್ಗೆ ಆರೋಪ ಮಾಡಲು ಏನು ಸಿಕ್ಕಿಲ್ಲ. ಈಗ ಈ ವಿಷಯವನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬರೀ ಪ್ರತಿಭಟನೆ ಮಾಡುವ ಉದ್ದೇಶದಿಂದಷ್ಟೇ ಪ್ರತಿಭಟನೆ ಮಾಡುತ್ತಿದ್ದಾರೆಯೇ ಹೊರತು. ಇದರಲ್ಲಿ ಯಾವುದೇ ಹುರಳಿಲ್ಲ. ಸಿದ್ದರಾಮಯ್ಯ ಮತ್ತು ಡಿಕೆಶಿ ನಿರುದ್ಯೋಗಿಗಳಾಗಿದ್ದಾರೆ. ಈಗ ಅವರು ಉದ್ಯೋಗ ಹುಡುಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂದು ಈ ವಿಚಾರವಾಗಿ ಸದಾಶಿವನಗರದ ತಮ್ಮ ನಿವಾಸದ ಮಾತನಾಡಿದ ಡಿಕೆಶಿ, ‘ನಾವು ಮುಖ್ಯಮಂತ್ರಿಗಳಿಗೆ, ಅವರ ಪದವಿಗೆ, ಹಿರಿತನಕ್ಕೆ ಗೌರವ ನೀಡುತ್ತೇವೆ. ಇವತ್ತೂ ಗೌರವಿಸುತ್ತೇವೆ- ನಾಳೆಯೂ ಗೌರವಿಸುತ್ತೇವೆ. ಅವರು ನಾವೆಲ್ಲ ಸತ್ತ ಕುದುರೆಗಳಂತೆ, ನಮ್ಮ ಪಕ್ಷವೇ ಇಲ್ಲ ಎಂದು ಹೇಳಿದ್ದಾರೆ . ಇನ್ನು, ಸಾಮ್ರಾಟ್ ಅಶೋಕ್‌ ಅವರು ನಾವು ನಿರುದ್ಯೋಗಿಗಳು ಎಂದಿದ್ದಾರೆ. ಅದು ನಿಜ, ಬಿಜೆಪಿ ಆಡಳಿತದಲ್ಲಿ ದೇಶದ ಎಲ್ಲೆಡೆ ನಿರುದ್ಯೋಗ ಹೆಚ್ಚಾಗಿದ್ದು, ನಾವು ಕೂಡ ನಿರುದ್ಯೋಗಿಗಳಾಗಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ದೇಶಕ್ಕೆ ಕೊಟ್ಟ ಬಹುದೊಡ್ಡ ಬಳುವಳಿ ನಿರುದ್ಯೋಗ ಸಮಸ್ಯೆ ಎಂದು ಬಿಜೆಪಿಗರಿಗೆ ಟಾಂಗ್‌ ಕೊಟ್ಟಿದ್ದಾರೆ.

ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಗೆ, ಗೃಹ ಸಚಿವರು ಟ್ರಾಫಿಕ್ ಜಾಮ್ ಅಂತಾರೆ. ನಾವು ಪ್ರತಿಭಟನೆ ಮಾಡಿದ್ದು ಅಸ್ತಿತ್ವಕ್ಕೆ ಅಲ್ಲ, ರಾಜ್ಯ ಹಾಗೂ ದೇಶದ ರೈತರ ಧ್ವನಿ ಪ್ರತಿಬಿಂಬಿಸಲು ಎಂದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ನಿರುದ್ಯೋಗಿಗಳು; ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ: ಸಚಿವ ಆರ್.ಅಶೋಕ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights