ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಶಾಕ್‌; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ BJP ಸೇರಿದ ಕೈ ಮುಖಂಡರು!

ತಮಿಳುನಾಡು ಚುನಾವಣೆ ವಸ್ತಿಲಿನಲ್ಲಿರುವಾಗಲೇ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಆಘಾತ ಎದುರಾಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ಪಕ್ಷದಿಂದ ಪದಚ್ಯತಿಗೊಂಡಿದ್ದ ಇಬ್ಬರು ಶಾಸಕರು MLA ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಬಿಜೆಪಿಗೆ ಸೇರಿದ್ದಾರೆ.

ಎ.ನಮಶಿವಾಯಂ ಹಾಗೂ ಈ.ತಿಪ್ಪೈನಾಥನ್‌ ಅವರು  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್‌ ನಮಶಿವಾಯಂ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ಪದಚ್ಯುತಿ ಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಮಶಿವಾಯಂ ಮತ್ತು ತಿಪ್ಪೈನಾಥನ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದ ಇಬ್ಬರೂ ಕೂಡ ಇಂದು (ಗುರುವಾರ) ಬಿಜೆಪಿಗೆ ಸೇರಿದ್ದಾರೆ.

ಅವರ ಸೇರ್ಪಡೆಯಿಂದ ರಾಜ್ಯದಲ್ಲಿ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಬಿಜೆಪಿ ತಿಳಿಸಿದೆ.

ಇದನ್ನೂ ಓದಿ: ಆಗ ಸಿಗಂ, BJP ಸೇರಿದ ಮೇಲೆ……?: ವೈರಲ್‌ ಆಗುತ್ತಿರುವ ಅಣ್ಣಾಮಲೈ ಫೋಟೋದ ಹಿನ್ನೆಲೆ ಏನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights