ಬಿಜೆಪಿ-ಜೆಡಿಎಸ್ ಮೈತ್ರಿ ಸಭಾಪತಿ ಸ್ಥಾನಕ್ಕಾಗಿ ಮಾತ್ರ; ಉಳಿದಂತೆ ರಾಜಿ ಇಲ್ಲ: ಹೆಚ್ಡಿಕೆ
ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿ ಕೇವಲ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಮಾತ್ರ. ಉಳಿದಂತೆ ಬೇರೆ ಯಾವುದೇ ಹೊಂದಾಣಿಕೆ ಇಲ್ಲ. ಅಗತ್ಯಬಿದ್ದರೆ ವಿಚಯಾಧಾರಿತ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಸಹಕಾರ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಾವು ಯಾವುದೇ ಕಾರಣಕ್ಕೂ ಜನ ವಿರೋಧಿ ನೀತಿಗಳಿಗೆ ಬೆಂಬಲ ನೀಡುವುದಿಲ್ಲ. ಇತ್ತೀಚೆಗೆ ಧಾರ್ಮಿಕ ಗುರುಗಳೂ ಕೂಡ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಜನರಿಗೆ ಒಳಿತಾಗುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮವಹಿಸಬೇಕು ಎಂದಿದ್ದಾರೆ.
ಪ್ರಧಾನಮಂತ್ರಿಗೆ ರೈತರ ಬಗ್ಗೆ ಗೌರವ ಇದ್ದರೆ ಅವರು ರೈತರನ್ನು ಕರೆದು ಸಭೆ ಮಾಡಬೇಕಿತ್ತು. ಕ್ಱಷಿಮಂತ್ರಿಯನ್ನ ಬಿಟ್ಟು ಸಭೆ ಮಾಡಿಸುವ ಬದಲು ಇವರೇ ಸಭೆ ನಡೆಸಬೇಕು. ಅವರ ಕಾಯ್ದೆಗಳಿಂದ ರೈತರಿಗೆ ಅನುಕೂಲ ಏನು ಎಂದು ತಿಳಿಸಲಿ. ರೈತರ ಗೊಂದಲಗಳಿಗೆ ಮನವರಿಕೆ ಮಾಡಲಿ. ಈಗ ರೈತರು ಮುಂದಿನ ಅಕ್ಟೋಬರ್ವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ. ಕಳೆದ 70 ದಿನಕ್ಕೂ ಹೆಚ್ಚು ದಿನಗಳಿಂದ ದೆಹಲಿಯಲ್ಲಿ ಹೋರಾಟ ಮಾಡ್ತಿದ್ದಾರೆ. ಹಾಗಾಗಿ ದೇಶದಲ್ಲಿ ಶಾಂತಿ ಕಾಪಾಡಲು ಪ್ರಧಾನಮಂತ್ರಿ ಕ್ರಮವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: