BJP ಮುಖಂಡನ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಬಹುಮಾನ: ಕಾಂಗ್ರೆಸ್‌ ನಾಯಕಿ ಘೋಷಣೆ!

ಬಿಲ್ಲವರ ಆರಾಧ್ಯ ದೈವ ಕೋಟಿ-ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ ನೀಡುವುದಾಗಿ ಮಂಗಳೂರು ಮಹಾನಾಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ತುಳುನಾಡಿನ ಅವಳಿ ದೈವವಾದ ಕೋಟಿ-ಚೆನ್ನಯರನ್ನು ಬಿಲ್ಲವರು ಆರಾಧ್ಯ ದೈವವೆಂದು ಪೂಜಿಸುತ್ತಾರೆ. ಅವರ ಬಗ್ಗೆ ಹಾಗೂ ಬಿಲ್ಲವ ಮುಖಂಡ, ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಬಗ್ಗೆ ಬಿಜೆಪಿಯ ಜಗದೀಶ್‌ ಅಧಿಕಾರಿ ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಹಾಗಾಗಿ ಅವರಿಗೆ ಮಸಿ ಬಳಿದವರಿಗೆ ಬಹುಮಾನ ನೀಡುವುದಾಗಿ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ದಕ್ಷಿನ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕಿಯಾಗಿರುವ ಪ್ರತಿಭಾ ಕುಲಾಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ಘೋಷಣೆಯನ್ನು ಮಾಡಿದ್ದಾರೆ. ತಮ್ಮ ವಿಡಿಯೋದಲ್ಲಿ ಅವರು, “ಸಂಘಟನೆಗಾಗಿ ಸಾಯುತ್ತೀರಿ, ಬಿಜೆಪಿಗಾಗಿ ನಾಯಕರಿಗಾಗಿ ಜೈಲು ಸೇರುತ್ತೀರಿ. ಆದರೆ ನಿಮ್ಮನ್ನು ಬಿಡಿಸಿಕೊಂಡು ಬರಲು ಯಾರೂ ಮುಂದೆ ಬರುತ್ತಿಲ್ಲ. ಇದನ್ನು ಪ್ರಶ್ನಿಸುವ ತಾಕತ್ತೂ ನಮ್ಮ ಯುವಕರಿಗಿಲ್ಲ” ಎಂದು ಹೇಳಿದ್ದಾರೆ.

ಮುಂದಿನ ಮೂರು ದಿನದ ಒಳಗಾಗಿ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಿಲ್ಲವರ ಆರಾಧನ ಸ್ಥಳವಾದ ಗರಡಿಗೆ ಕ್ಷಮೆ ಕೇಳಬೇಕು ಎಂದಿರುವ ಪ್ರತಿಭಾ, “ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಪ್ರಥಮವಾಗಿ ಅವರ ಮುಖಕ್ಕೆ ಮಸಿ ಬಳಿಯಿರಿ. ಅವರಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡುತ್ತೇನೆ” ಎಂದು ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

“ಜಗದೀಶ್ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ತಕ್ಷಣವೆ ಉಚ್ಚಾಟನೆ ಮಾಡಬೇಕು. ಅವರು ಜನಾರ್ಧನ ಪೂಜಾರಿ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 60% ದಷ್ಟಿರುವ ಬಿಲ್ಲವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಪ್ರತಿಭಾ ಅವರ ವಿಡಿಯೋ ಇದೀಗ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ವಿಡಿಯೋ: BJP ಮುಖಂಡನ ಮೇಲೆ ಇಂಕ್‌ ಸುರಿದು- ಸೀರೆ ತೊಡಿಸಿ ಅವಮಾನ ಮಾಡಿದ ಶಿವಸೇನಾ ಕಾರ್ಯಕರ್ತರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights