BPL‌ ಕಾರ್ಡ್: ವಿರೋಧಕ್ಕೆ ಮಣಿದ ಉಮೇಶ್‌ ಕತ್ತಿ; ಹಿಂದಿನ ಮಾನದಂಡಗಳೇ ಮುಂದುವರಿಕೆ!

ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಹೊಂದಿರುವ ಹಾಗೂ 05 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಬಿಪಿಎಲ್ ಕಾರ್ಡ್‌ ರದ್ದುಗೊಳಿಸಲಾಗುತ್ತದೆ ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ, ಇದೀಗ ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ. ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾದ ನಂತರ, ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರೆಯುತ್ತವೆ ಎಂದು ಅವರು ಹೇಳಿದ್ದಾರೆ.

ನಾನು ಸಚಿವನಾದ ನಂತರ ಯಾವುದೇ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಬಿಪಿಎಲ್ ಗೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ‘ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್‌ಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು.

ಅಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷ ರೂಗಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ಹಿಂಪಡೆಯುತ್ತದೆ. ಏಪ್ರಿಲ್ ಬಳಿಕ ಸರ್ಕಾರ ಬಿಪಿಎಲ್ ಕಾರ್ಡುದಾರರ ಪರಿಶೀಲನೆ ನಡೆಸಲಿದೆ. ಒಂದು ವೇಳೆ ಈ ಎಲ್ಲ ಸೌಲಭ್ಯಗಳು ಇದ್ದರೂ ಬಿಪಿಎಲ್ ಕಾರ್ಡು ಹೊಂದಿದ್ದರೆ ಅಂತಹವರಿಗೆ ದಂಡದ ಜತೆಗೆ ಶಿಕ್ಷೆ ಸಹ ನೀಡಲಾಗುತ್ತದೆ ಎಂದು ಉಮೇಶ್ ಕತ್ತಿ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ರಾಜ್ಯದ ಜನರಿಗೆ ಶಾಕ್‌: ಟಿವಿ, ಬೈಕ್, ಫ್ರಿಡ್ಜ್ ಇದ್ದರೆ BPL ಕಾರ್ಡ್‌ ಕಟ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights