ಪಂಚಮಸಾಲಿ 2ಎ ಮೀಸಲಾತಿ ಹೋರಾಟ : ಕೆ. ಸುಧಾಕರ್ ಹೇಳಿದ್ದೇನು?
ಅನ್ಯಾಯ, ವಂಚನೆಗೊಳಗಾದ ಸಮುದಾಯಗಳನ್ನ ಗುರುತಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರಕ್ಕೆ ವಿಶೇಷ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು. ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಪ್ರಯತ್ನಿಸುತ್ತೇವೆ. ಅನ್ಯಾಯ ವಂಚನೆಗೊಳಗಾದ ಸಮುದಾಯಗಳನ್ನು ಗುರುತಿಸಲಾಗುವುದು. ಇದು ಗಂಭಿರ ಮತ್ತು ಸೂಕ್ಷ್ಮಿವಾದ ವಿಚಾರವಾಗಿದೆ. ಉಳಿದ ಸಮುದಾಯಗಳಿಗೆ ಅನ್ಯಾಯವಾಗದಂತೆ ಸಿಎಂ ನೋಡಿಕೊಳ್ಳುತ್ತಾರೆ ಎಂದರು.
ಇದೇ ವೇಳೆ ಮಹಾರಾಷ್ಟ್ರದಲ್ಲಿ ಕೊರೊನಾ ಸಂಖ್ಯೆ ಹೆಚ್ಚಳವಾಗಿದೆ. ಈ ಬಗ್ಗೆ ಕಲಬುರಗಿ ಜಿಲ್ಲಾಡಳಿತದೊಂದಿಗೆ ಮಾತನಾಡುತ್ತೇನೆ. ಕಲಬುರಗಿ ಜಿಲ್ಲೆ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದ್ದರಿಂದ ಸೂಕ್ಷ್ಮವಾಗಿದೆ.
ಇದರ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಸೋಂಕು ಹರಡದಂತೆ ಬಿಗಿಯಾದ ಮಾರ್ಗಸೂಚಿಗಳನ್ನು ತೆಗೆದುಕೊಳ್ಳುತ್ತೇವೆ. ಲಾಕ್ ಡೌನ್ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.