ಹೊಸಪೇಟೆ: ಕೋರ್ಟ್‌ ಆವರಣದಲ್ಲಿಯೇ ಕಾಂಗ್ರೆಸ್‌ ಮುಖಂಡ-ವಕೀಲನ ಕೊಲೆ!

ನ್ಯಾಯಾಲಯದ ಆವರಣದಲ್ಲಿಯೇ ವಕೀಲರಾಗಿರುವ ಕಾಂಗ್ರೆಸ್‌ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ತಾರಿಹಳ್ಳಿ ನಿವಾಸಿಯಾದ ವಕೀಲ ವೆಂಕಟೇಶ್ ಅವರನ್ನು ಅವರ ಸಂಬಂಧಿಗಳೇ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಆಸ್ತಿ ವಿವಾದವೇ ಕಾರಣ ಎಂದು ಶಂಕಿಸಲಾಗಿದೆ.

ಹೊಸಪೇಟೆ ಕೋರ್ಟ್‌ ಆವರಣದಲ್ಲಿ ವೆಂಕಟೇಶ್‌ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ವೆಂಕಟೇಶ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ​ ವೆಂಕಟೇಶ್‌ ಅವರನ್ನು ಅವರ ಸಂಬಂಧಿ ಯುವಕನೇ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಹೊಸಪೇಟೆಯಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೊಸಪೇಟೆ ಟೌನ್ ಠಾಣೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪೌರಕಾರ್ಮಿಕ ಆತ್ಮಹತ್ಯೆ: ಅಧಿಕಾರಿಗಳ ಕಿರುಕುಳವೇ ಕಾರಣ ಎಂದ ಡೆತ್‌ನೋಟ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights