ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ವಿದ್ಯಾರ್ಥಿಗಳ ಪ್ರತಿಭಟನೆ!

ಬೆಂಗಳೂರಿನ ವಿವಿ ಪುರಂನಲ್ಲಿ ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಒತ್ತಡವೇ ಕಾರಣವೆಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.

ಇಂದು ಬೆಳಿಗ್ಗೆ 9 ಗಂಟೆಗೆ ಕಾಲೇಜಿನ 4ನೇ ಫ್ಲೋರ್ ನಿಂದ ಜಿಗಿದು ಜಯಂತ ರೆಡ್ಡಿ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಂಜಿನೀಯರಿಂಗ್ ಮೂರನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತೀವ್ರ ರಕ್ತ ಶ್ರಾವವಾಗಿದ್ದ ವಿದ್ಯಾರ್ಥಿಯನ್ನು ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬದುಕುಳಿಯಲಿಲ್ಲ.  ಸ್ಥಳಕ್ಕೆ ವಿವಿ ಪುರಂ ಪೊಲೀಸ್ ಠಾಣೆ ಪೊಲೀಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿ ಸಾವಿನ ವಿಚಾರ ಮುಚ್ಚಿಡಲು ಪ್ರಯತ್ನಿಸುತ್ತಿದ್ದು ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿದೆ. ಮಾತ್ರವಲ್ಲದೇ ಜಯಂತ್ ಪರೀಕ್ಷೆ ಒತ್ತಡದಿಂದಲೇ ಸಾವಿನ ನಿರ್ಧಾರಕ್ಕೆ ಬಂದ ಎಂದು ಈತ ಸ್ನೇಹಿತರು ಆರೋಪಿಸಿದ್ದಾರೆ. ಸೂಕ್ತ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights