ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರಿಗೆ ಮುತ್ತಿಗೆ : ಎಲ್ಲೆಲ್ಲೂ ಟ್ರಾಫಿಕ್ ಜಾಮ್!

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರಿಗೆ ಮುತ್ತಿಗೆ ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ರ್ಯಾಲಿ ನಡೆಸುತ್ತಿದ್ದಾರೆ.

ಡಿಸಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚು ಜನ ಪೊಲೀಸರುನ್ನು ನೇಮಿಸಲಾಗಿದ್ದು ದೊಡ್ಡ ಮಟ್ಟದ ಭದ್ರತೆ ನೀಡಲಾಗಿದೆ. ಉಚಿತ ಈಎಸ್ ಐ ಸೌಲಭ್ಯ,ವೈದ್ಯಕೀಯ ಸೌಲಭ್ಯ, ಎಲ್ ಕೆ ಜಿ-ಯುಕೆಜಿ ಅಂಗನವಾಡಿಯಲ್ಲಿ ಪ್ರಾರಂಭಿಸಿಬೇಕು,ಪಿಂಚಿಣಿ ಸೇರಿದಂತೆ 7 ಬೇಡಿಕೆಗಳನ್ನು ಈಡೇರಿಸುವಂತೆ ಸಾವಿರಾರು ಸಂಂಕ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದರೆ. ಮೆಜಿಸ್ಟಿಕ್ ನಿಂದ ಬೃಹತ್ ಮೆರವಣಿಗೆ ಮುಂದಾಗಿದ್ದಾರೆ.

ಸರ್ಕಾರ ಕೊಟ್ಟ ಭರವಸೇಗಳು ಈಡೇರದ ಹಿನ್ನೆಲೆಯಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಳಾಗಿದೆ. ಕೆಎಸ್ ಆರ್ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ರ್ಯಾಲಿ ನಡೆಸಲಿದ್ದಾರೆ. ಸರ್ಕಾರ ಕೂಡಲೇ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಕಾರರು ಬೀದಿಗಿಳಿದ ಪರಿಣಾಮ ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ನ ಬಿಸಿ ತಟ್ಟಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights