ಹತ್ರಾಸ್ನಲ್ಲಿ ಮಗಳಿಗೆ ಕಿರುಕುಳ : ದೂರು ನೀಡಿದ ತಂದೆಗೆ ಗುಂಡು ಹಾರಿಸಿದ ಪಾಪಿ!

ಮಗಳಿಗೆ ಕಿರುಕುಳ ನೀಡಿದ ಎಂದು ದೂರು ಕೊಟ್ಟ ತಂದೆಯನ್ನೇ ಕೊಂದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ.

ಮಗಳಿಗೆ ಕಿರುಕುಳ ನೀಡುವ ಆರೋಪದ ಮೇಲೆ 2018 ರಲ್ಲಿ ಗೌರವ್ ಶರ್ಮಾ ಎಂಬಾತನ ವಿರುದ್ಧ ಸಂತ್ರಸ್ತೆ ತಂದೆ ದೂರು ನೀಡಿದ್ದರು. ಸೋಮವಾರ ಸಂಜೆ ಸಂತ್ರಸ್ತೆ ತಂದೆ ಅವರ ಪತ್ನಿ ಮತ್ತು ಚಿಕ್ಕಮ್ಮ ಸೇರಿ ಆರು ಮಂದಿ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದ ಶರ್ಮಾ ಹಾಗೂ ಹುಡುಗಿ ಕುಟುಂಬದ ನಡುವೆ ವಗ್ವಾದ ನಡೆದಿದೆ. ವಾದದ ನಂತರ ಕೆರಳಿದ ಶರ್ಮಾ ಹುಡುಗಿ ತಂದೆಯ ಎದೆಗೆ ತಲೆಗೆ ಗುಂಡು ಹಾರಿಸಿದ್ದಾನೆ. ಕೂಡಲೇ ತಂದೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ.

ತಂದೆಯನ್ನು ಕಳೆದುಕೊಂಡ ಹುಡುಗಿ ಶರ್ಮಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾಳೆ.  ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ ಮತ್ತು ಅವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ವಿಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights