JDS ತೊರೆದು ಕಾಂಗ್ರೆಸ್‌ಗೆ ಮಧು ಬಂಗಾರಪ್ಪ?

ಜೆಡಿಎಸ್‌ನ ಪ್ರಮುಖ ಮಖಂಡರಲ್ಲಿ ಒಬ್ಬರಾಗಿರುವ ಮಧು ಬಂಗಾರಪ್ಪ ಅವರು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿವೆ.

ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಮಧು ಬಂಗಾರಪ್ಪ, ಈಗಲೇ ತಾವು ಯಾವ ನಿರ್ಧಾರವನ್ನೂ ಮಾಡಿಲ್ಲ. ಜಿಲ್ಲಾ ಪಂಚಾಯತ್‌ ಚುನಾವಣೆಯ ವೇಳೆಗೆ ತಮ್ಮ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ.

ನಾನಿನ್ನೂ ಜೆಡಿಎಸ್‌ ಪಕ್ಷದಲ್ಲಿಯೇ ಇದ್ದೇನೆ. ಜೆಡಿಎಸ್‌ ನಾಯಕರೊಂದಿಗೆ ಇದೂವರೆಗೂ ಈ ಬಗ್ಗೆ ಯಾವುದೇ ಚರ್ಚೆಯನ್ನು ನಾನು ನಡೆಸಿಲ್ಲ. ಜೆಡಿಎಸ್‌ ನಾಯಕರೊಂದಿಗೆ ಚರ್ಚಿಸಿ, ಹಿತೈಷಿಗಳು, ಕಾರ್ಯಕರ್ತರ ಅಭಿಪ್ರಾಯ ಪಡೆದು ಜಿಲ್ಲಾ ಪಂಚಾಯತ್‌ ಚುನಾವಣೆಯ ವೇಳೆಗೆ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

ನನ್ನನ್ನು ರಾಜಕೀಯದಲ್ಲಿ ಬೆಳೆಸಿದ್ದೇ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪಕ್ಷದಲ್ಲಿ ಕೆಲವು ಗೊಂದಲಗಳಿವೆ. ನಾನು ಅವರೊಂದಿಗೆ ಮೊದಲು ಚರ್ಚಿಸಬೇಕು. ಚುನಾವಣೆ ಬಂದಾಗ ಪಕ್ಷ ಬದಲಾವಣೆ ಮಾಡೋದು ತಪ್ಪು, ಅದಕ್ಕೂ ಮುಂಚೆಯೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬಿಗ್‌ಬಾಸ್‌ ಮನೆಗೆ BJP ಎಂಎಲ್‌ಸಿ ವಿಶ್ವನಾಥ್? ಹಳ್ಳಿಹಕ್ಕಿ‌ ಹೇಳಿದ್ದೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights