ಸಾಹುಕಾರನ ‘ಕಾಮ’ ಕಾಂಡ : ನಾನವನಲ್ಲಾ.. ನಾನವನಲ್ಲಾ… ಎಂದ ಜಾರಕಿಹೊಳಿ…

ರಾಸಲೀಲೆ ವೀಡಿಯೋ ರಿಲೀಸ್ ಆಗುತ್ತಿದ್ದಂತೆ ಕೆಲ ಸಮಯ ಕಣ್ಮರೆಯಾಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಡೆಗೂ ಮಾದ್ಯಮದ ಮುಂದೆ ಮಾತನಾಡಿದ್ದಾರೆ.

ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ವೀಡಿಯೋವೊಂದನ್ನ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ರಮೆಶ್ ಜಾರಕಿಹೊಳಿ ಮಾತನಾಡಿ,” ನಾನು ಯಾವುದೇ ತಪ್ಪು ಮಾಡಿಲ್ಲ. ಅವರು ಯಾರು ಎನ್ನುವುದು ನನಗೆ ಗೊತ್ತಿಲ್ಲ. ವೀಡಿಯೊದಲ್ಲಿರುವ ವ್ಯಕ್ತಿ ನಾನಲ್ಲ. ಇದು ನಕಲಿ ವೀಡಿಯೋ. ನಾನು ಸೌಮ್ಯ ಸ್ವಭಾವದ ವ್ಯಕ್ತಿ. ವೈಯಕ್ತಿವಾಗಿ ಬಳಸಿಕೊಂಡು ರಾಜಕೀಯ ಮಾಡಲಾಗುತ್ತಿದೆ. ಇದರ ಬಗ್ಗೆ ತನಿಖೆಯಾಗಲಿ. ತಪ್ಪು ಮಾಡಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡುತ್ತೇನೆ” ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ “ಸತ್ಯ, ಅಸತ್ಯ ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಬಳಿಕೆ ನಿರ್ಧಾರ ಮಾಡೋಣ” ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಆದರೆ “ರಾಸಲೀಲೆ ವೀಡಿಯೋದಲ್ಲಿರುವ ವ್ಯಕ್ತಿ ನಮ್ಮ ಸಹೋದರ ಅಲ್ಲ. ಅವರು ರಾಜೀನಾಮೆ ಕೊಡುವ ಸಾಧ್ಯತೆ ಇಲ್ಲ. ಇದು ನಕಲಿ ಮಾಡಲಾಗಿದೆ. ವೀಡಿಯೋ ನಕಲಿ ಆದ್ದರಿಂದ ಮಾನನಷ್ಟ ಮೊಕದ್ದಮೆ ಹಾಕಲಾಗುತ್ತದೆ” ಎಂದು ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿದ್ದು, ಸಹೋದರನ ಅಧಿಕಾರ ಉಳಿವಿಗಾಗಿ ಸಿಎಂ ನಿವಾಸಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ.

ಡ್ರೋನ್ ಕ್ಯಾಮೆರಾಗಳ ಮೂಲಕ ಕರ್ನಾಟಕದ ಡ್ಯಾಂ ಗಳನ್ನು ಚಿತ್ರೀಕರಣ ಮಾಡಲು ಮಹಿಳೆ ಬಯಸಿದ್ದರು. ಆದರೆ ಈ ಮಹಿಳೆಯನ್ನು ರಮೇಶ್ ಜಾರಕಿಹೊಳಿ ತನ್ನ ಕಾಮ ತೃಷೆಗೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕ ಭವನದಲ್ಲಿ ಈ ರಾಸಲೀಲೆ ನಡೆದಿದೆ. ಈ ವೀಡಿಯೋ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಕೋಕಾಕ್ ಕ್ಷೇತ್ರದಲ್ಲಿ ಮಾತ್ರ ಪವರ್ ಕಟ್ ಮಾಡಲಾಗಿತ್ತು ಎಂದು ಜನ ಹೇಳಿಕೊಂಡಿದ್ದಾರೆ.

ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, “ಪ್ರಭಾವಿ ನಾಯಕರ ವಿರುದ್ಧ ದೂರು ನೀಡುತ್ತಿದ್ಧೇನೆ. ಸಂತ್ರಸ್ತೆಯ ಹೆಸರು ಬಹಿರಂಗ ಪಡಿಸುವುದಿಲ್ಲ. ಸಂತ್ರಸ್ತೆಗೆ ಬೆದರಿಕೆ ಇರುವ ಕಾರಣ ಮಹಿಳೆ ಬರುವುದಿಲ್ಲ”  ಎಂದು ಮಾಧ್ಯಮದ ಮುಂದೆ ಹೇಳಿದ್ದಾರೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights