ಬಜೆಟ್ ಮಂಡನೆಗೆ ಕಾಂಗ್ರೆಸ್ ವಿರೋಧ : ‘ಕೈ’ ನಾಯಕರಿಂದ ಸಭಾತ್ಯಾಗ!
ವಿಧಾನಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರು ಬಜೆಟ್ ಮಂಡಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಾಂಗ್ರಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಈ ವೇಳೆ ಜೈಶ್ರೀರಾಮ ಘೋಷಣೆ ಬಿಜೆಪಿ ಸದಸ್ಯರು ಕೂಗಿದ್ದಾರೆ.
ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಎದುರಾದ ಆರ್ಥಿಕ ಸಂಕಷ್ಟ ಸೇರಿದಂತೆ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆಗೆ ಕಾಂಗ್ರೆಸ್ ವಿರೋಧದ ನಡುವೆಯೂ ಬಿಎಸ್ ಯಡಿಯೂರಪ್ಪ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2021-22 ಬಜೆಟ್ ನಲ್ಲಿ ಮಹಿಳೆಯರಿಗೆ ನೀಡಿದ ಆಧ್ಯತೆಗಳೇನು ಅದರ ಪ್ರಮುಖ ಮುಖ್ಯಾಂಶಗಳು ಹೀಗಿದೆ.
ಸಂಕಷ್ಟದ ನಡುವೆ ಸರ್ಕಾರ ಕೆಲಸ ಮಾಡಿದೆ. ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರಿಗೆ ರಿಯಾತಿ ನೀಡಲಾಗಿದೆ. 60 ಸಾವಿರ ಮಹಿಳೆಯರಿಗೆ ಉದ್ಯೋಗ, ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ, ನಿರ್ಭಯ ಯೋಜನೆ ಅಡಿ ಬೆಂಗಳೂರಿನಲ್ಲಿ 7500 ಕ್ಯಾಮಾರಗಳು ಅಳವಡಿಕೆ, ಜಿಲ್ಲೆಗಳಲ್ಲಿ 2 ಶಿಶಿಪಾಲನಾ ಕೇಂದ್ರಗಳು, ಮಹಿಳಾ ಉದ್ಯಮಿಗಳಿಗೆ ಶೇ.4 ಬಡ್ಡಿದರದಲ್ಲಿ ಸಾಲ, ವನಿತಾ ಸಂಗಾತಿ ಹೆಸರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್. ಹಪ್ಪಳ, ಉಪ್ಪಿನ ಕಾಯಿ ತಯಾರಿಕರಿಗೆ ಆನ್ ಲೈನ್ ಮಾರಾಟ, ಮಹಿಳಾ ಉದ್ಯೋಗಿಗಳಿಗೆ ಶೇ.2 ರಷ್ಟು ಬಡ್ಡಿ ಸಾಲ ಬಜೆಟ್ ನಲ್ಲಿ ಘೋಷಿಸಿದ್ದಾರೆ.