ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮಕ್ಕೆ ಪ್ರಚಾರಕ್ಕಾಗಿ ತೆರಳಿದ ವೇಳೆ ನಾಲ್ಕು ಅಥವಾ ಐದು ಜನರ ಗುಂಪು ಹಲ್ಲೆ ನಡೆಸಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದು ಎಡ ಪಾದದ ಮೂಳೆಗೆ ಪೆಟ್ಟಾಗಿದೆ. ಬಲ ಭುಜ ಹಾಗೂ ಕುತ್ತಿಗೆ ಭಾಗದಲ್ಲೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್ಎಸ್ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.
“ಮಮತಾ ಬ್ಯಾನರ್ಜಿಯನ್ನು ಮೌನಗೊಳಿಸಲು ಪ್ರಯತ್ನಿಸುವುದು ಇದೇ ಮೊದಲಲ್ಲ. ಈ ಹಿಂದೆ ರೈತರ ಪರವಾಗಿ ನಿಂತಾಗ ಅವರ ಮೇಲೆ ದಾಳಿ ಮಾಡಲಾಗಿತ್ತು. ಆದರೆ ಯಾವುದನ್ನೂ ನೋಡದ ಅವರು ಪ್ರಬಲ ಧ್ವನಿಯಾಗಿ ಮುಂದುವರಿಯುತ್ತಾರೆ ”ಎಂದು ಅಭಿಷೇಕ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
.@BJP4Bengal Brace yourselves to see the power of people of BENGAL on Sunday, May 2nd.
Get READY!!! pic.twitter.com/dg6bw1TxiU
— Abhishek Banerjee (@abhishekaitc) March 10, 2021
ನಂದಿಗ್ರಾಮ್ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ. ಶುಕ್ರವಾರ ಸಂಜೆ 5 ಗಂಟೆಯ ವೇಳೆಗೆ ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳು ತಿಳಿಸಿವೆ.