ನಡು ರಸ್ತೆಯಲ್ಲೇ ಪೌರ ಕಾರ್ಮಿಕನ ಮೇಲೆ ಹಲ್ಲೆ; ಇಬ್ಬರ ಬಂಧನ

ನಡುರಸ್ತೆಯಲ್ಲಿಯೇ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ಉಡುಪಿಯಲ್ಲಿ ನಡೆದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿಯ ಸಿಟಿ ಬಸ್‌ ನಿಲ್ದಾಣದ ಸಮೀಪದಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಿಂದ ಕಸ ಸಂಗ್ರಹಿಸಲು ಹಲ್ಲೆಗೊಳಗಾದ ಪೌರ ಕಾರ್ಮಿಕ ತೆರಳಿದ್ದರು. ಈ ವೇಳೆ ಅಂಗಡಿಯ ಇಬ್ಬರು ಕೆಲಸಗಾರರು ಅತನ ಮೇಲೆ ನಡಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಇಬ್ಬರನ್ನೂ ಬಂಧಿಸಲಾಗಿದೆ.

ಒಣ ಕಸ ಮತ್ತು ಹಸಿ ಕಸ ಮಿಶ್ರಣ ವಿಚಾರವಾಗಿ ಪೌರ ಕಾರ್ಮಿಕ ಮತ್ತು ಅಂಗಡಿ ಕೆಲಸಗಾರರ ನಡುವೆ ವಾಗ್ವಾದ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಪೌರಕಾರ್ಮಿಕ ಬಾಗಲಕೋಟೆ ಮೂಲದವರಾಗಿದ್ದು, ಉಡುಪಿಯ ನಿಟ್ಟೂರು ನಿವಾಸಿ ಸಂಜು ಮಾದರ್ ಎಂದು ತಿಳಿದುಬಂದಿದೆ. ಪೊಲೀಸರು ಹಲ್ಲೆ ನಡೆಸಿದ ಇಬ್ಬರು ಆರೋಪಿಗಳಾದ ಇಸ್ಮಾಯಿಲ್ ಮತ್ತು ಸುಹೇಲ್ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಯಡಿಯೂರಪ್ಪ ಮುಕ್ತ BJPಗೆ ಸಿದ್ದತೆ ಜೋರಾಗಿದೆ: ಕಾಂಗ್ರೆಸ್‌ ಲೇವಡಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights