ಕಾಂಗ್ರೆಸ್ನ ಶಿವಮೊಗ್ಗ ಚಲೋ ಹೋರಾಟದಲ್ಲಿ ಗಲಭೆ ಸೃಷ್ಟಿಸಲು BJP ಸಂಚು: ಡಿಕೆಶಿ ಆರೋಪ
ಭದ್ರವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಗೇಮೇಶ್ ಅವರನ್ನು ಅವರನ್ನು ಸದನದಿಂದ ಅಮಾನತು ಮಾಡಿರುವುದನ್ನು ಮತ್ತು ಅವರ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಶಿವಮೊಗ್ಗ ಚಲೋ ನಡೆಸುತ್ತಿದೆ. ಈ ವೇಳೆ ಪ್ರತಿಭಟನಾ ರ್ಯಾಲಿಯಲ್ಲಿ ಗಲಭೆ ನಡೆಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಶಾಸಕ ಸಂಗಮೇಶ್ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ. ನಮ್ಮ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿದ್ದಾರೆ. ಈ ಎಲ್ಲಾ ಪ್ರಕರಣಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಚಲೋ ನಡೆಸುತ್ತಿದ್ದೇವೆ.
ಸಿಎಂ ತವರು ಜಿಲ್ಲೆ ಶಿವಮೊಗ್ಗದಿಂದ ಆರಂಭವಾಗುತ್ತಿರುವ ಹೊರಾಟ ರಾಜ್ಯದ ಜನತೆಗೆ ಹಲವಾರು ಸಂದೇಶಗಳನ್ನು ರವಾನಿಸಲಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ನ ಜನಾಕ್ರೋಶ ಮೆರವಣಿಗೆಯಲ್ಲಿ ಗಲಭೆ ಸೃಷ್ಟಿಸಲು ಬಿಜೆಪಿ ಸಂಚು ರೂಪಿಸಿದೆ. ಕಾಂಗ್ರೆಸ್ ಕಾರ್ಯಕರ್ತರ ವೇಷದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕಳಿಹಿಸಿ, ಅವರಿಂದ ಬೇರೆ ಬೇರೆ ರೀತಿಯ ಘೋಷಣೆಗಳನ್ನು ಕೂಗಿಸಿ ಗಲಬೆ ಸೃಷ್ಟಿಸಲು ಸಂಚು ನಡೆದಿದೆ. ಈ ಬಗ್ಗೆ ಸ್ವತಃ ಬಿಜೆಪಿ ಕಾರ್ಯಕರ್ತರೇ ನಮಗೆ ಮಾಹಿತಿ ನೀಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
ಇದನ್ನೂ ಓದಿ: ಕಳೆದ 05 ವರ್ಷಗಳಲ್ಲಿ 405 ಶಾಸಕರ ಪಕ್ಷಾಂತರ; ಕಾಂಗ್ರೆಸ್ ತೊರೆದವರು 170 ಮಂದಿ!