‘ಸಿಎಂ ಬದಲಾವಣೆ ನೂರಕ್ಕೆ ನೂರು ಖಚಿತ’- ಯತ್ನಾಳ್

ಪಶ್ಚಿಮ ಬಂಗಾಳ ಚುನಾವಣೆ ಮುಗಿದ ಮೇಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ನೂರಕ್ಕೆ ನೂರು ಖಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೆ ಸಿಎಂ ಬದಲಾವಣೆ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, “ಯಾರ ಮಾತು ನಿಜ ಯಾರ ಮಾತು ಸುಳ್ಳು ಎನ್ನುವುದು ಗೊತ್ತಾಗುತ್ತೆ. ಬಿಜೆಪಿ ಉಳಿಯ ಬೇಕು ಅಂದ್ರೆ ಸಿಎಂ ಬದಲಾಗಬೇಕು. ಕಾಲ ಎಲ್ಲದರಕ್ಕೂ ಉತ್ತರ ಹೇಳುತ್ತದೆ. ಈ ಮುಖ್ಯಮಂತ್ರಿಗಳನ್ನು ತೆಗೆದುಕೊಂಡು ಮುಂದಿನ ಚುನಾವಣೆಗೆ ಹೋದರೆ ಬಿಜೆಪಿ ಕಥೆ ಮುಗಿಯಿತು. ಇದು ರಾಷ್ಟ್ರೀಯ ಕಾರ್ಯದರ್ಶಿಗಳು ಗೊತ್ತಿರಬೇಕು” ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಮಾತನಾಡುತ್ತಿರುವುನ್ನ ಪ್ರಶ್ನಿಸಿದಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ, ಎಂಪಿ ರೇಣುಕಾಚಾರ್ಯ, “ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಯತ್ನಾಳ್ ಗೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಮಾಡಲು ನೀನು ಯಾರು ? ನೀನಾ ಅವರನ್ನು ಮುಖ್ಯಮಂತ್ರಿ ಮಾಡಿದ್ದು?” ಎಂದು ಕಟೂವಾಗಿ ಪ್ರಶ್ನಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ನಿಂದ ಹಲವಾರು ಬಾರಿ ವಾರ್ನಿಂಗ್ ಕೊಟ್ಟಿದ್ದರೂ ಯತ್ನಾಳ್ ಇಂಥ ಹೇಳಿಕೆಗಳನ್ನು ಕೊಡುತ್ತಲೇ ಇದ್ದಾರೆ. ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರಾದರೂ ಯತ್ನಾಳ್ ರಾಜಾರೋಷವಾಗಿ ಹೇಳಿಕೊಳ್ಳುವುದು ಅನುಮಾನಕ್ಕೆ ದಾರಿ ಮಾಡಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights