ಸಿದ್ದರಾಮಯ್ಯ ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್ ರಾಜೀನಾಮೆ ನೀಡುತ್ತಾರೆ: ನಳಿನ್ ಕುಮಾರ್ ಕಠೀಲ್
ಕಾಂಗ್ರೆಸ್ ಈಗ ಒಳಜಗಳದ ಪಕ್ಷವಾಗಿದೆ. ಹಾಗಾಗಿ ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ನೀಡುತ್ತಾರೆ ಎಂದು BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಠೀಲ್ ಹೇಳಿದ್ದಾರೆ.
ಉಪಚುನಾವಣೆಯ ಭಾಗವಾಗಿ ಮಸ್ಕಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಅದೇ ರೀತಿಯಲ್ಲಿ ಕಾಂಗ್ರೆಸ್ ಸೋಲುವ ಪಕ್ಷವಾಗಿದೆ. ಹೀಗಾಗಿ ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಕಾಂಗ್ರೆಸ್ಅನ್ನೂ ತೊರೆಯಲಿದ್ದಾರೆ ಎಂದು ನಳಿನ್ ಹೇಳಿದ್ದಾರೆ.
ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದಾರೆ. ಅವರ ಅಸ್ತಿತ್ವನ್ನು ಉಳಿಸಿಕೊಳ್ಳುವ ಸವಾಲು ಅವರಿಗೆ ಅನಿವಾರ್ಯವಾಗಿದೆ. ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಆ ಕಾರಣಕ್ಕಾಗಿಯೇ ಅವರು ಒಂದೇ ಬಾರಿ 90 ಜೊತೆ ಬಟ್ಟೆ ತೆಗೆದುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಚುನಾವಣಾ ರ್ಯಾಲಿ, ಸಮಾವೇಶಗಳಿಗೆ ಕೊರೊನಾ ಹರಡಲ್ವಾ? ಬಿಎಸ್ವೈಗೆ ಹೆಚ್ಡಿಕೆ ಟಾಂಗ್!