ಸರಣಿ ಅಪಘಾತ: ಮೂವರು ಸಾವು; ಇಬ್ಬರ ಸ್ಥಿತಿ ಗಂಭೀರ!
ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಾಟಾ ಸಫಾರಿ, ಕ್ಯಾಂಟರ್ ಮತ್ತು ಕಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿಯ ಜವನಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ರಸ್ತೆಯ ಡಿವೈಡರ್ ದಾಟಿದ ಸಫಾರಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ಗೂ ಡಿಕ್ಕಿಹೊಡೆದಿದೆ.
ಘಟನೆಯಲ್ಲಿ ಟಾಟಾ ಸಫಾರಿಯಲ್ಲಿ ಪ್ರಯಾಣಿಸುತ್ತಿದ್ದ ಹೊಸದುರ್ಗದ ನೇಮಿರಾಜ್ (58), ಅವರ ಪತ್ನಿ ನಂದಾ (53) ಹಾಗೂ ಕ್ಯಾಂಟರ್ ಚಾಲಕ ಪುಣೆಯ ರಂಗ (35) ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸ್ ಠಾಣೆಯಲ್ಲಿ ಘಟನೆಯ ಬಗ್ಗೆ ಪ್ರಕರಣ ದಾಖಲಾಗಿದೆ.
Read Also: ಚಲಿಸುತ್ತಿದ್ದ ಕಾರಿನಿಂದ ಹೊರ ಬಿದ್ದ ಮಗು : ಮುಂದೇನಾಯ್ತು ನೋಡಿ..